ಮೈಸೂರು: ರಾಜ್ಯಾಧ್ಯಂತ ಹಿಜಾಬ್ ವಿವಾದ ತಾರಕಕ್ಕೇರಿದೆ. ಇದೇ ಸಂದರ್ಭದಲ್ಲಿ ರಾಜಕೀಯ ನಾಯಕರ ಪರ-ವಿರೋಧದ ಚರ್ಚೆ ಕೂಡ ನಡೆಯುತ್ತಿದೆ. ನಿನ್ನೆ ಸಂಸದಗೆ ತಿರುಗೇಟು ನೀಡಿದ್ದಂತ ಶಾಸಕ ತನ್ವೀರ್ ಸೇಠ್ , ಇದೇನ್ ನಿಮ್ಮ ತಾತದ್ದಾ ದೇಶ ಅಂತ ವಾಗ್ದಾಳಿ ನಡೆಸಿದ್ದರು.ಇಂದು ಹೌದು.. ನಮ್ಮ ತಾತನದ್ದೇ ಅಂತ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ತನ್ವೀರ್ ಸೇಠ್ ಪೂರ್ವಜರು ಮೆಕ್ಕಾ-ಮದೀನದಿಂದ ಬಂದವರಲ್ಲ, ಇಲ್ಲೇ ಹುಟ್ಟಿ, ಮತಾಂತರಗೊಂಡವರು. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಸರ್ಕಾರ ಆದೇಶ ಬಗ್ಗೆ ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅವರು, ಸರ್ಕಾರದ ಆದೇಶವನ್ನು ಎಲ್ಲಾ ವಿದ್ಯಾರ್ಥಿಗಳು ಪಾಲಿಸುವಂತೆ ಮನವಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada