ಸೆಟ್ಟೇರಿತು ಚಿನ್ನಾರಿ ಮುತ್ತನ ಮತ್ತೊಂದು ಹೊಸ ಸಿನಿಮಾ…FIR 6 to 6 ಚಿತ್ರಕ್ಕೆ ಪ್ರಿಯಾಂಕಾ ಉಪೇಂದ್ರ ಕ್ಲ್ಯಾಪ್!

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ ವಿಜಯ್ ರಾಘವೇಂದ್ರ ಮತ್ತೊಮ್ಮೆ ಹೊಸ ತಂಡದ ಜೊತೆ ಕೈ ಜೋಡಿಸಿದ್ದಾರೆ. ಈ ಹಿಂದೆ ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ 24/7 ಹಾಗೂ ವಿರಾಮದ ನಂತರ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ರಮಣ್ ರಾಜ್ ಕೆ ಈ ಬಾರಿಗೆ ವಿಜಯ್ ರಾಘವೇಂದ್ರಗೆ ಆಕ್ಷನ್ ಕಟ್ ಹೇಳಿದ್ದಾರೆ. FIR 6 to 6 ಎಂಬ ಕ್ಯಾಚಿ ಟೈಟಲ್ ನಡಿ ಸಿನಿಮಾ ಮೂಡಿ ಬರ್ತಿದ್ದು, ಇವತ್ತು ಬೆಂಗಳೂರಿನ ಕಲ್ಯಾಣ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿತು. ಉಪ್ಪಿ ಶ್ರೀಮತಿ ಪ್ರಿಯಾಂಕಾ ಉಪೇಂದ್ರ ಸಿನಿಮಾಗೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.ಸಸ್ಪೆನ್ಸ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ FIR 6 to 6 ಸಿನಿಮಾದಲ್ಲಿ ವಿಜಯ್ ರಾಘವೇಂದ್ರಗೆ ಜೋಡಿಯಾಗಿ ಅಕ್ಷಿತಾ ಬೋಪಯ್ಯ ನಟಿಸ್ತಿದ್ದು, ಉಳಿದಂತೆ ಯಶ್ ಶೆಟ್ಟಿ, ಬಾಲರಾಜ್ ವಾಡಿ, ಎಸ್ ಕೆ ನಾಗೇಂದ್ರ ಅರಸ್, ಶ್ರೀ ರಾಜು ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.ಯಶ್ ಫಿಲ್ಮಂ ಪ್ರೊಡಕ್ಷನ್ ಬ್ಯಾನರ್ ನಡಿ ಭಾಗ್ಯ ಆರ್ ಸಿನಿಮಾಗೆ ಬಂಡವಾಳ ಹೂಡಿದ್ದು, ಎಸ್.ಕೆ.ನಾಗೇಂದ್ರ ಅರಸ್ ಸಂಕಲನ, ಸತೀಶ್ ಬಾಬು ಸಂಗೀತ ನಿರ್ದೇಶನ ಹಾಗೂ ಓಂ.ಜಿ ಛಾಯಾಗ್ರಹಣ FIR 6 to 6 ಸಿನಿಮಾಕ್ಕಿದೆ. ವಿಶೇಷವಾಗಿ ಓಂ ಜಿ ಈ ಸಿನಿಮಾಗೆ ಐದು ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡುತ್ತಿದ್ದಾರೆ. ಇಂದಿನಿಂದಲೇ ಶೂಟಿಂಗ್ ಶುರುವಾಗಿದ್ದು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಭರದಿಂದ ಸಾಗ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ವಾರ ಬೆಂಗಳೂರಿನಲ್ಲಿ ನಡೆಯುವ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದ,ಕೇಜ್ರಿವಾಲ್!

Tue Apr 19 , 2022
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಏಪ್ರಿಲ್ 21 ರಂದು ರೈತರ ಸಮಾವೇಶವನ್ನು ಉದ್ದೇಶಿಸಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೋಮವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ರಾಜ್ಯಾದ್ಯಂತ ಸುಮಾರು 50,000 ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇಲ್ಲಿಯವರೆಗೂ ಕರ್ನಾಟಕದ ರೈತರು ರಾಜ್ಯದಲ್ಲಿ ಮೂರು ಪಕ್ಷಗಳಿಗೆ […]

Advertisement

Wordpress Social Share Plugin powered by Ultimatelysocial