ಆಸ್ತಿ ವಿಚಾರಕ್ಕೆ ಮಾವನನ್ನೇ ಚಾಕುವಿನಿಂದ ಇರಿದು ಕೊಂದ ಅಳಿಯ.

 

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ಅಳಿಯನೇ ಮಾವನನ್ನು ಭೀಕರವಾಗಿ 20 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸುಳ್ಳ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುಳ್ಳದ ಗ್ರಾಮದ ಶಿವಪ್ಪ ಎಂಬಾತನ ಜೊತೆ ಆತನ ಅಳಿಯ ಆಸ್ತಿಯ ವಿಚಾರಕ್ಕೆ ಜಗಳ ತೆಗೆದಿದ್ದ. ಇದೇ ವೇಳೆ ಊರಿನಲ್ಲಿರುವ ಹಾಲಿನ ಕೇಂದ್ರದ ಮುಂದೆಯೇ ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ ಸದ್ಯ ಕೊಲೆಯ ದೃಶ್ಯಾವಳಿಗಳು ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

20ಕ್ಕೂ ಹೆಚ್ಚು ಬಾರಿ ಶಿವಪ್ಪನ ಮೇಲೆ ಆತನ ಅಳಿಯ ಚಾಕು ಇರಿದ ನಂತರ ಚಾಕು ಶಿವಪ್ಪನ ದೇಹದಲ್ಲಿ ಸಿಲುಕಿಕೊಂಡಿದೆ ಆಗ ಅಲ್ಲಿನ ಗ್ರಾಮಸ್ಥರು ಬಂದು ಅಳಿಯನನ್ನು ತಡೆಯಲು ಪ್ರಯತ್ನ ಪಟ್ಟಿದ್ದಾರೆ.ಆದರೆ ಅಷ್ಟರಲ್ಲಾಗಲೇ ಶಿವಪ್ಪನ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಲೆ ಬಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಳಿಮಾತೆ ಕೈಲಿ ಸಿಗರೇಟ್ ವಿವಾದ.

Sat Jan 21 , 2023
ಕಾಳಿಮಾತೆ ಕೈಯಲ್ಲಿ ಸಿಗರೇಟ್ ಕೊಟ್ಟ ಪೋಸ್ಟರ್ ವಿವಾದಕ್ಕೆ ಸಂಬಂಧಿಸಿದಂತೆ ನಿರ್ದೇಶಕಿ ಲೀನಾ ಮಣಿಮೇಗಲೈ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಿರುವಂತೆ ಸುಪ್ರೀಂ ಕೋರ್ಟ್ ನಿರ್ದೇಶಕಿ ಪರ ಹೇಳಿಕೆ ನೀಡಿದೆ. ಲೀನಾ ನಿರ್ದೇಶನದಲ್ಲಿ ಮೂಡಿ ಬಂದ ಕಾಳಿ ಸಾಕ್ಷ್ಯ ಚಿತ್ರದ ಪೋಸ್ಟರ್ ನಲ್ಲಿ ಎಲ್.ಜಿ.ಬಿ.ಟಿ.ಕ್ಯೂ ಧ್ವಜ ಹಿಡಿದು ಸಿಗರೇಟು ಸೇದುತ್ತಿರುವಂತೆ ಚಿತ್ರಿಸಲಾಗಿತ್ತು. ತಮ್ಮ ಸಿನಿಮಾದ ಪೋಸ್ಟರ್ ನಲ್ಲಿ ಕಾಳಿ ಮಾತೆಯ ಕೈಗೆ ಸಿಗರೇಟು ಕೊಟ್ಟಿರುವ ವಿಚಾರಕ್ಕಾಗಿ ಭಾರೀ ವಿವಾದ ಎಬ್ಬಿಸಿದ್ದ […]

Advertisement

Wordpress Social Share Plugin powered by Ultimatelysocial