ರಾಣೆಬೆನ್ನೂರಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಗರದ ಬಸ್ ಸ್ಟ್ಯಾಂಡ್ ನಲ್ಲಿ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ನಡೆಸಿದರು.
KSRTC ನೌಕರರಿಗೆ ಬೆಂಬಲ ಸೂಚಿಸಿ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರವನ್ನು ರವಾನಿಸಿದರು .ನಂತರ ಮಾತನಾಡಿದ ರವೀಂದ್ರ ಗೌಡ ಪಾಟೀಲ್ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ, ಖಾಸಗಿ ಬಸ್ಸುಗಳ ಓಡಾಟ, ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಆಪಾದನೆ ಮಾಡುವುದೊಂದೇ ಪರಿಹಾರವಲ್ಲ. ಅಪಾದನೆ ಕೈಬಿಟ್ಟು ನೌಕರರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ರವೀಂದ್ರ ಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.