ನಾಡದ್ರೋಹಿ ಎಂ ಇ ಎಸ್ ಸಂಘಟನೆಯನ್ನು ನಿಷೇಧಿಸುವ ಕುರಿತು ಹಾಗೂ ಶಿವಸೇನೆ ಪುಂಡಾಟಿಕೆ ಹತ್ತಿಕ್ಕುವ ಸಲುವಾಗಿ ಹೆಚ್.ಶಿವರಾಮೇಗೌಡರ ಕರವೇ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಒತ್ತಾಯಿಸಿ ಮನವಿಪತ್ರ ಸಲ್ಲಿಸಲಾಯಿತು.ಬಾಗಲಕೋಟೆ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದಿಂದ ಎಂಇಎಸ್ ಭೂತದಹನ ಹಾಗೂ ಶಿವಸೇನೆ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದು,ಕಳೆದ ಎರಡ್ಮೂರು ದಿನಗಳ ಹಿಂದೆ ಶಿವಸೇನೆ ಪುಂಡರಿಂದ ನಮ್ಮ ಕರುನಾಡಿನ ಹರಿಸಿನ ಮತ್ತು ಕೆಂಪು ಬಣ್ಣದ ಧ್ವಜವನ್ನು ಸುಟ್ಟು ಹಾಕುವ ಮೂಲಕ ಹಾಗೂ ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಅವಮಾನ ಮಾಡುವ ಉದ್ಧಟತನ ಮೆರೆದಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯ ಪುಂಡರಿಗೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಬೇಕು.ಆದಷ್ಟು ಬೇಗ ಇಂತಹ ನಾಡದ್ರೋಹಿ ಹಾಗೂ ದೇಶದ್ರೋಹಿಗಳಿಗೆ ಶಿಕ್ಷಿಸಿ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ನಮ್ಮ ಈ ಮನವಿಗೆ ಆದಷ್ಟು ಬೇಗ ರಾಜ್ಯ ಸರಕಾರದವರು ಸ್ಪಂದಿಸಿ ಕನ್ನಡಿಗರಿಗೆ ನ್ಯಾಯ ಕೊಡಿಸಬೇಕೆಂದು ಕೇಳಿ ಕೊಳ್ಳುತ್ತಿದ್ದೇವೆ ಇಲ್ಲದಿದ್ದ ಪಕ್ಷದಲ್ಲಿ ಕರವೇ ಉಗ್ರವಾದ ಹೋರಾಟ ಮಾಡಬೇಕಾಗಿರುವದು ಅನಿವಾರ್ಯ ಅಂತಾ ತಿಳಿಸುತ್ತಾ ಪೊಲೀಸ ಇಲಾಖೆಗೆ ಇಂತಹ ಪುಂಡಪೋಕರಿಗಳನ್ನು ಹತ್ತಿಕ್ಕಲು ಪೂರ್ಣ ಪ್ರಮಾಣದ ಅಧಿಕಾರ ನೀಡಬೇಕೆಂದು ಕರವೇ ಒತ್ತಾಯ ಪಡಿಸಿ ನಂತರ ಜಿಲ್ಲಾಧಿಕಾರಿಯವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada