BREAKING NEWS: ಪ್ರೌಢಶಾಲೆ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ;

ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಲಿಖಿತ ಪರೀಕ್ಷೆಗಳನ್ನು ಹಮ್ಮಿಕೊಂಡಿರುವ ವಿಸ್ತøತವಾದ ವೇಳಾಪಟ್ಟಿ ಹಾಗೂ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಅಂಶಗಳ ಸಹಿತವಾಗಿ ಈಗಾಗಲೇ ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ದಾವಣಗೆರೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರಾಢಶಾಲಾ ವೃಂದದ ಅರ್ಹ ಶಿಕ್ಷಕರು, ಇಲಾಖಾ ವೆಬ್‍ಸೈಟ್‍ನಲ್ಲಿ ಡಿ.31 ರಿಂದ ಜ.08 ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಸಮಗ್ರ ಶಿಕ್ಷಣ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಜಿ.ಆರ್ ತಿಪ್ಪೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

BENGALURU:ಬನ್ನೇರುಘಟ್ಟ ಉದ್ಯಾನದ ಶುಲ್ಕ ಏರಿಕೆ;

Thu Dec 30 , 2021
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಝೂ, ಸಫಾರಿ, ಬಟರ್ ಫ್ಲೈ ಪಾರ್ಕ್ ದರಗಳು ಪರಿಷ್ಕರಣೆಗೊಂಡಿದ್ದು, ಹೊಸ ದರ ಜನವರಿ 1 ರಿಂದ ಜಾರಿಗೆ ಬರಲಿದೆ. ಬುಧವಾರ ರಾಷ್ಟ್ರೀಯ ಉದ್ಯಾನ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೋಮವಾರದಿಂದ ಶುಕ್ರವಾರ, ವಾರಾತ್ಯ ಮತ್ತು ಸರ್ಕಾರಿ ರಜೆ ದಿನಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರಗಳು 2022ರ ಜನವರಿ 1 ರಿಂದ ಜಾರಿಗೆ ಬರಲಿವೆ. ಹೊಸ ವರ್ಷದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial