ತಾಲ್ಲೂಕು ಕಚೇರಿ ಆವರಣದಲ್ಲಿರುವ ಸಾರ್ವಜನಿಕರ ಅನುಕೂಲಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಆದರೆ ನಿರ್ವಹಣೆ ಮಾಡುವಲ್ಲಿ ಪುರಸಭೆ ಅಧಿಕಾರಿಗಳ ನಿರ್ಲಕ್ಷತನದಿಂದ ಸುಮಾರು 3-4 ತಿಂಗಳಿನಿಂದ ಬೀಗ ಜಡಿಯಲಾಗಿದ್ದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಪ್ರತಿನಿತ್ಯ ಹಳ್ಳಿಗಳಿಂದ ನೂರಾರು ಸಾರ್ವಜನಿಕರು ತಮ್ಮ ಕೆಲಸಗಳಿಗೆ ತಾಲ್ಲೂಕು ಕಚೇರಿಗೆ ಆಗಮಿಸುತ್ತಾರೆ ಸಾರ್ವಜನಿಕರು ಶೌಚಾಲಯಕ್ಕೆ ಹೋಗಬೇಕಾದರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಹೋಗಬೇಕಾದ ಪರಿಸ್ಥಿತಿ ಹಲವಾರು ಬಾರಿ ಸಾರ್ವಜನಿಕರು ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಮಾಡಿದ್ದರು ಸಹ ಪ್ರಯೋಜನವಾಗಿಲ್ಲ ತ್ವರಿತ ಗತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಿದ್ದರೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪಾತಕೋಟೆ ನವೀನ್ ಕುಮಾರ್ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…