ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಕಡಿತದ ಕುರಿತಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಇಲಾಖೆ ಪರಿಶೀಲನಾ ಸಭೆ ನಡೆಸಲಿದೆ.ಇಂದು ಪಿಯು ಬೋರ್ಡ್ ಅಧಿಕಾರಿಗಳ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ ನಡೆಸಲಿದ್ದು, ದ್ವಿತೀಯ ಪಿಯುಸಿ ಪಠ್ಯ ಕಡಿತದ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.ವಿದ್ಯಾರ್ಥಿಗಳು ಮತ್ತು ಪೋಷಕರು ಪಠ್ಯ ಕಡಿತ ಮಾಡುವಂತೆ ಮನವಿ ಮಾಡಿದ್ದು, ಶೇ 20 ರಷ್ಟು ಪಠ್ಯ ಕಡಿತ ಮಾಡಬೇಕಾ? ಅಥವಾ ಪರ್ಯಾಯ ಅನುಕೂಲ ಮಾಡಬೇಕಾ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಈಗಾಗಲೇ ಶೇ. 20 ರಷ್ಟು ಭಾಷ ವಿಷಯಗಳ ಪಠ್ಯ ಕಡಿತ ಮಾಡಲಾಗಿದ್ದು, ಈಗ ಐಚ್ಛಿಕ ವಿಷಯ ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮನವಿ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada