ಹುಬ್ಬಳ್ಳಿ: ನಟ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಸಿನಿಮಾ ಬಿಡುಗಡೆ ಹಾಗೂ ಜನ್ಮ ದಿನದ ಪ್ರಯುಕ್ತ ಇಲ್ಲಿನ ಸುಧಾ ಮತ್ತು ಅಪ್ಸರಾ ಥಿಯೇಟರ್ ಬಳಿ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.
ಪುನೀತ್ ಅಭಿಮಾನಿ ಹಾಗೂ ಜೈ ರಾಜವಂಶ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘು ವದ್ದಿ ಅವರು, ಸುಧಾ ಥಿಯೇಟರ್ ಎದುರು ಮೂವತ್ತಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಸನ್ಮಾನಿಸಿದರು.
ಎಲ್ಲರಿಗೂ ಪುನೀತ್ ಭಾವಚಿತ್ರಗಳನ್ನು ಉಚಿತವಾಗಿ ವಿತರಿಸಿದರು.
ಬಳಿಕ ಮಾತನಾಡಿದ ಅವರು, “ಅಪ್ಪು ಅಣ್ಣನ ಅನುಪಸ್ಥಿತಿಯಲ್ಲಿ ಅವರ ಸಿನಿಮಾ ಬಿಡುಗಡೆಯಾಗುತ್ತದೆ ಎಂದು ಕನಸಲ್ಲೂ ಯೋಚಿಸಿರಲಿಲ್ಲ. ಅಮರರಾಗಿರುವ ಅವರು ನಮ್ಮೊಂದಿಗೆ ಸದಾ ಇರಲಿದ್ದಾರೆ. ಹಾಗಾಗಿ, ಅವರ ಜನ್ಮದಿನದ ಅಂಗವಾಗಿ ಹಿರಿಯ ನಾಗರಿಕರನ್ನು ಸನ್ಮಾನಿಸಿ, ಫೋಟೋಗಳನ್ನು ವಿತರಿಸಿದ್ದೇನೆ. ಎಲ್ಲರ ಮನೆ-ಮನದಲ್ಲೂ ಅಪ್ಪು ಶಾಶ್ವತವಾಗಿ ನೆಲೆಸಲಿದ್ದಾರೆ” ಎಂದು ಭಾವುಕರಾದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada
Please follow and like us:
Thu Mar 17 , 2022
ಬಹುನಿರೀಕ್ಷಿತ ರಸ್ತೆ ಯೋಜನೆ-10-ಲೇನ್ ವಿಸ್ತರಣೆ ಬೆಂಗಳೂರಿನಿಂದ ಮೈಸೂರಿಗೆ ಡಿಸೆಂಬರ್ 2022 ರೊಳಗೆ ಸಿದ್ಧವಾಗುವ ಸಾಧ್ಯತೆಯಿದೆ. ಡೆಕ್ಕನ್ ಹೆರಾಲ್ಡ್ (ಡಿಎಚ್) ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವ ಸಿಸಿ ಪಾಟೀಲ್, ಈ ವರ್ಷ ಡಿಸೆಂಬರ್ನೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ, ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದರು. ಈ ರಸ್ತೆಯಲ್ಲಿನ ಅಂಡರ್ಪಾಸ್ ಮತ್ತು ಸರ್ವಿಸ್ ರಸ್ತೆಗಳ ಗುಣಮಟ್ಟವನ್ನು ಪರಿಶೀಲಿಸಲು. 7,400 ಕೋಟಿ ಅಂದಾಜು ವೆಚ್ಚದಲ್ಲಿ ಕಾರ್ಯಗತಗೊಂಡಿದ್ದು, ಬೆಂಗಳೂರಿನಿಂದ ನಿಡಘಟ್ಟದವರೆಗಿನ […]