ಪುನೀತ್‌ಗೆ ಪದ್ಮಶ್ರೀ ನೀಡುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು,ಮಾ.17- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

 

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪದ್ಮಶ್ರೀ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.

ಜೇಮ್ಸ್ ಸಿನಿಮಾಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯ್ತಿ ನೀಡಬೇಕು. ಪುನೀತ್ ಅವರ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಳ ಪ್ರೀತಿ ಇಟ್ಟುಕೊಂಡಿದ್ದರು. ಹೀಗಾಗಿ ಕೂಡಲೇ ಈ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೋಡಬೇಕು ಎಂದರು.ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನಪ್ರಶಸ್ತಿ ಘೋಷಣೆ ಮಾಡಿದ್ದರು. ಆದಷ್ಟು ಬೇಗ ಪ್ರಶಸ್ತಿಯನ್ನು ನೀಡಬೇಕು ಎಂದು ಹೇಳಿದರು.

ಪುನೀತ್ ಅವರು ಬಹಳ ಜನಪ್ರಿಯ ವ್ಯಕ್ತಿ. ಅವರ ಚಿತ್ರವನ್ನು ಎಲ್ಲರೂ ನೋಡಬೇಕು. ಪುನೀತ್‍ರಾಜ್‍ಕುಮಾರ್ ಅಭಿನಯದ ರಾಜಕುಮಾರ ಸಿನಿಮಾವನ್ನು ನೋಡಿದ್ದ ಎಂದು ಸ್ಮರಿಸಿದರು.

ಸಮವಸ್ತ್ರ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಮನವಿ ಸಲ್ಲಿಸಲು ಅವಕಾಶವಿದೆ. ಕೆಲ ಸಂಘಟನೆಗಳು ಬಂದ್ ಕರೆ ನೀಡಿದ್ದಾರೆ. ಪ್ರತಿಭಟನೆ ಅವರ ಹಕ್ಕು. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದರು.
ತೀರ್ಪು ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ಅಸಮಧಾನವಾಗಿದೆ ಹಾಗಾಗಿ ಪ್ರತಿಭಟನೆಗೆ ಮುಂದಾಗಿರಬಹುದು ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

IPL:'ಬದಲಿ ಇದ್ದರೆ, ಅವರು ₹ 14 ಕೋಟಿಗೆ ಹೋಗುತ್ತಿರಲಿಲ್ಲ';

Thu Mar 17 , 2022
ದೀಪಕ್ ಚಹಾರ್ ಅವರ ಫಿಟ್‌ನೆಸ್ ಕುರಿತ ಊಹಾಪೋಹಗಳು ಕಳೆದ ಕೆಲವು ವಾರಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳನ್ನು ತುದಿಗಾಲಲ್ಲಿಟ್ಟಿದ್ದವು. ಕಳೆದ ತಿಂಗಳು ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ 14 ಕೋಟಿ ರೂ.ಗಳಿಗೆ ಸಿಎಸ್‌ಕೆಯಿಂದ ಮರಳಿ ಖರೀದಿಸಲ್ಪಟ್ಟ ಭಾರತೀಯ ವೇಗಿ, ಶ್ರೀಲಂಕಾ ವಿರುದ್ಧ ತವರಿನಲ್ಲಿ ಭಾರತದ ಕೊನೆಯ ಸೀಮಿತ-ಓವರ್‌ಗಳ ನಿಯೋಜನೆಯನ್ನು ಕಳೆದುಕೊಳ್ಳಬೇಕಾಯಿತು, ಅಲ್ಲಿ ತಂಡವು 3- ದಾಖಲಿಸಿತು. 0 ಸರಣಿ ಗೆಲುವು. ಚಹರ್ ಪಂದ್ಯಾವಳಿಯ ಮೊದಲ ಎರಡು ವಾರಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial