ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೀವಂತವಾಗಿದ್ದ ಹಲವಾರು ಒಳ್ಳೆಯ ಕೆಲಸಗಳು ಹಾಗೂ ಮಾಡಿದ್ದ ಅದೆಷ್ಟೋ ಸಹಾಯಗಳು ಅಪ್ಪು ನಿಧನದ ನಂತರ ಆಚೆಗೆ ಬಂದವು. ಇಷ್ಟೆಲ್ಲಾ ಸಹಾಯ ಮಾಡಿ ಎಲ್ಲಿಯೂ ಸಹ ಪ್ರಚಾರ ತೆಗೆದುಕೊಳ್ಳದೇ ತಾನಾಯಿತು, ತನ್ನ ಪಾಡಾಯಿತು ಎಂದು ಬದುಕಿದ್ದ ರಾಜಕುಮಾರನ ಗುಣಕ್ಕೆ ಕನ್ನಡಿಗರು ಸೋತು ಹೋದರು.ಅಭಿಮಾನಿಗಳೇ ನಮ್ಮನೆ ದೇವ್ರು ಎಂದಿದ್ದ ಪುನೀತ್ ರಾಜ್ಕುಮಾರ್ ಅವರನ್ನು ಕನ್ನಡ ಜನತೆ ಹಾಗೂ ಅಭಿಮಾನಿಗಳು ಈಗ ದೇವರೆಂದು ಆರಾಧಿಸುತ್ತಿದ್ದಾರೆ.ಪುನೀತ್ ಮರಣ ಹೊಂದಿದ ನಂತರ ರಾಜ್ಯದ ವಿವಿಧ ಊರುಗಳ ವಿವಿಧ ರಸ್ತೆಗಳಿಗೆ, ವೃತ್ತಗಳಿಗೆ, ಬಸ್ ನಿಲ್ದಾಣಗಳಿಗೆ ಹಾಗೂ ಪಾರ್ಕ್ಗಳಿಗೆ ಸೇರಿದಂತೆ ಹಲವಾರು ಸಾರ್ವಜನಿಕ ಸ್ಥಳಗಳಿಗೆ ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಇಡಲಾಯಿತು. ಇನ್ನು ಕೇವಲ ರಾಜ್ಯ ಮಾತ್ರವಲ್ಲದೇ ದೇಶದಿಂದ ಆಚೆಗೂ ಸಹ ಪುನೀತ್ ಮೇಲಿನ ಪ್ರೀತಿ ಎಂಥದ್ದು ಎಂಬುದು ಸಾಬೀತಾಗಿತ್ತು. ಆಸ್ಟ್ರೇಲಿಯಾದ ಸಿಡ್ನಿ ನಗರದ ಪಾರ್ಕ್ ಒಂದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಇಡಲಾಗಿತ್ತು.ಹೀಗೆ ದೇಶ ಭಾಷೆಗಳೆನ್ನದೇ ಪುನೀತ್ ರಾಜ್ಕುಮಾರ್ ಮೇಲಿನ ಪ್ರೀತಿಯನ್ನು ಜನರು ವ್ಯಕ್ತಪಡಿಸುತ್ತಿದ್ದು, ರಾಜ್ಯದ ಹಲವೆಡೆ ಪುತ್ಥಳಿಗೂ ಸಹ ನಿರ್ಮಾಣಗೊಂಡವು. ಅದರಲ್ಲಿಯೂ ಹೊಸಪೇಟೆ ನಗರದಲ್ಲಿ ಪುನೀತ್ ರಾಜ್ಕುಮಾರ್ ಅವರ ಬೃಹತ್ ಕಟ್ಟಡವನ್ನು ನಿಲ್ಲಿಸಿ ದೊಡ್ಡ ಕಾರ್ಯಕ್ರಮ ನಡೆಸಿ ಪುತ್ಥಳಿಯನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದೇ ರೀತಿ ಬಳ್ಳಾರಿಯಲ್ಲಿಯೂ ಸಹ ಪುನೀತ್ ರಾಜ್ಕುಮಾರ್ ಅವರ ಬೃಹತ್ ಪುತ್ಥಳಿ ನಿಲ್ಲಿಸಲು ತೀರ್ಮಾನಿಸಲಾಗಿದ್ದು, ಪುನೀತ್ ಇಷ್ಟಪಡುವವರಿಗೆ ಇದು ಸಂತಸದ ಹಾಗೂ ಹೆಮ್ಮೆಯ ಸುದ್ದಿಯಾಗಿದೆ.
https://play.google.com/store/apps/details?id=com.speed.newskannada