PUNJAB:ಪಂಜಾಬ್ ಕಾರ್ಯಕ್ರಮ ರದ್ದಾಗೋದಕ್ಕೆ ಕಾರಣ ಖಾಲಿ ಕುರ್ಚಿಗಳೇ ಹೊರತು ಭದ್ರತಾ ಲೋಪವಲ್ಲ;

ಪಂಜಾಬ್ ಕಾರ್ಯಕ್ರಮ ರದ್ದಾಗೋದಕ್ಕೆ ಕಾರಣ ಖಾಲಿ ಕುರ್ಚಿಗಳೇ ಹೊರತು ಭದ್ರತಾ ಲೋಪವಲ್ಲ: ಕಾಂಗ್ರೆಸ್ ಹೇಳಿಕೆ

ನಿನ್ನೆ ನಡೆಯಬೇಕಿದ್ದ ಪ್ರಧಾನಿಯವರ ಪಂಜಾಬ್ ಕಾರ್ಯಕ್ರಮ ರದ್ದಾಗಿರುವುದಕ್ಕೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಹೇಳಿದೆ. ಜೊತೆಗೆ ಬಿಜೆಪಿಯ ಹಲವು ನಾಯಕರು ಈ ಘಟನೆಗೆ ಪಂಜಾಬ್ ನ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನ ಅಲ್ಲಗಳೆದಿರುವ ಕಾಂಗ್ರೆಸ್ ಕಾರ್ಯಕ್ರಮ ರದ್ದಾಗೋದಕ್ಕೆ ಭದ್ರತಾ ಲೋಪವಲ್ಲ ಬದಲಿಗೆ ಪಂಜಾಬ್ ಜನರ ನಿರಾಕರಣೆ ಕಾರಣ ಎಂದಿದೆ‌.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಹಿರಿಯ ವಕ್ತಾರ ರಂದೀಪ್ ಸುರ್ಜೇವಾಲಾ ಟ್ವೀಟ್ ಮಾಡಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರಿಗೆ ಟಾಂಗ್ ಕೊಟ್ಟಿದ್ದಾರೆ.‌

ನಿಮ್ಮ ಪ್ರಧಾನಿಯವರು ರ್ಯಾಲಿಗೆ ಬರದೆ ಹಿಂತಿರುಗಿದ್ದು ಭದ್ರತಾ ಲೋಪದಿಂದಲ್ಲ, ಕಾರ್ಯಕ್ರಮದ ಸ್ಥಳದಲ್ಲಿದ್ದ ಖಾಲಿ ಕುರ್ಚಿಗಳಿಂದ. ಖಾಲಿ ಕುರ್ಚಿಗಳಿರೋ ವಿಡಿಯೋ ಹಂಚಿಕೊಂಡಿರುವ ಸುರ್ಜೇವಾಲಾ, ನಿಮ್ಮ ರೈತವಿರೋಧಿ ನಡವಳಿಕೆಯೆ ಇದಕ್ಕೆ ಕಾರಣ. ಆತ್ಮಾವಲೋಕನ ಮಾಡಿಕೊಂಡು ಸತ್ಯವನ್ನ ಸ್ವೀಕರಿಸಿ. ನಿಮ್ಮ ತಪ್ಪಿನಿಂದಾಗಿರುವ ಪ್ರಮಾದಕ್ಕೆ ಕಾಂಗ್ರೆಸ್ಸನ್ನ ಆರೋಪಿಸುವುದನ್ನ ನಿಲ್ಲಿಸಿ. ಪಂಜಾಬ್ ನ ಜನತೆ ರ್ಯಾಲಿಯಿಂದ ದೂರ ಉಳಿದು, ನಿಮ್ಮ ಅಹಂಕಾರದ ಆಡಳಿತಕ್ಕೆ ಕನ್ನಡಿ ಹಿಡಿದು ಸತ್ಯದರ್ಶನ‌ ಮಾಡಿಸಿದ್ದಾರೆ ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಮೋದಿ ಮೊದಲು ಕಾರ್ಯಕ್ರಮದ ಯೋಜನೆಯ ಬೇರೆ ಇತ್ತು ಎಂದಿರುವ ಅವರು, ಪಂಜಾಬ್ ರೈತರು ಮೋದಿ ಭೇಟಿಯನ್ನ ಮೊದಲಿನಿಂದಲೂ ವಿರೋಧಿಸುತ್ತಿದ್ದಾರೆ. ಅವರು ಪ್ರತಿಭಟಿಸುತ್ತಿರುವುದಕ್ಕೆ ಕಾರಣ ಉತ್ತರ ಪ್ರದೇಶ, ದೆಹಲಿ, ಹರಿಯಾಣ, ಪಂಜಾಬ್ ರೈತರ ಮೇಲೆ ಹಾಕಿರುವ ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯಲು. ಈವರೆಗೂ ಸತ್ತಿರುವ 700 ರೈತ ಕುಟುಂಬಕ್ಕೆ ಪರಿಹಾರ ನೀಡಿ ಎಂಬ ಬೇಡಿಕೆ ಅವರದ್ದು ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

SANDALWOOD:'ಬಡವ ರಾಸ್ಕಲ್' ಸಿನಿಮಾ ಧನಂಜಯ್ ಹೇಳಿದ್ದೇನು?

Thu Jan 6 , 2022
ಡಾಲಿ ಧನಂಜಯ್ ನಟಿಸಿ ಮೊದಲ ಬಾರಿಗೆ ನಿರ್ಮಾಣ ಸಹ ಮಾಡಿರುವ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24 ರಂದು ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದಾಗಿನಿಂದಲೂ ಬಿಡುವಿಲ್ಲದೆ ರಾಜ್ಯದ ಹಲವು ಜಿಲ್ಲೆ, ತಾಲ್ಲೂಕುಗಳನ್ನು ಸುತ್ತಿರುವ ಡಾಲಿ ಧನಂಜಯ್ ‘ಬಡವ ರಾಸ್ಕಲ್’ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರಗಳ ಬಳಿ ಹೋಗಿ ಪ್ರೇಕ್ಷಕರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ, ಸಿನಿಮಾಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಡಾಲಿ ಧನಂಜಯ್ ಹಾಗೂ ತಂಡದ ಶ್ರಮದಿಂದ […]

Advertisement

Wordpress Social Share Plugin powered by Ultimatelysocial