ಪುತ್ತೂರು: ಜೀಪ್- ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿ; ಐವರಿಗೆ ಗಂಭೀರ ಗಾಯ

ಪುತ್ತೂರು, ಜ.29: ಜೀಪ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್‍, ಗುರು, ಹರ್ಷಿತ್, ಲೀಲಾ ಹಾಗೂ ಲಕ್ಷ್ಮೀ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ.ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪ್‍ ಮತ್ತು ದೇರ್ಲ ಕಡೆಯಿಂದ ಕೆಯ್ಯೂರಿನತ್ತ ತೆರಳುತ್ತಿ‍ದ್ದ ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರಾವಸ್ಥೆಯಲ್ಲಿದ್ದ ಪ್ರವೀಣ್‍ ಮತ್ತು ಗುರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದಲ್ಲಿ ಆಟೋ ರಿಕ್ಷಾ ಹಾಗೂ ಜೀಪ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಈ ಬಗ್ಗೆ ಸಂಪ್ಯ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಳೆದ 10 ವರ್ಷಗಳಿಂದ ಸರಕಾರಿ ಉದ್ಯೋಗಕ್ಕೆ ಕಾದು ಕೊನೆಗೆ ಆತ್ಮಹತ್ಯೆಗೈದ ಯುವಕ

Sat Jan 29 , 2022
ಜೈಪುರ್: ಕಳೆದ ಹತ್ತು ವರ್ಷಗಳಿಂದ ಸರಕಾರಿ ನೌಕರಿಯೊಂದನ್ನು ಪಡೆಯಬೇಕೆಂದು ಹರಸಾಹಸ ಪಟ್ಟಿದ್ದ 28 ವರ್ಷದ ನಮೋ ನಾರಾಯಣ್ ಮೀನಾ ಎಂಬ ಯುವಕ ಇತ್ತೀಚೆಗೆ ಧೋಲ್ಪುರ್ ನಗರದ ತನ್ನ ಬಾಡಿಗೆ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಈ ಯುವಕ ಒಂದು ಡೆತ್ ನೋಟ್ ಅನ್ನೂ ಬರೆದಿಟ್ಟಿದ್ದು ರಾಜ್ಯದ ಹಿಂದಿನ ಬಿಜೆಪಿ ಸರಕಾರವು ಆಯುರ್ವೇದ ಕಂಪೌಂಡರ್ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಹೇಳಿದ್ದರೂ ಆ ನಿಟ್ಟಿನಲ್ಲಿ ಕ್ರಮಕೈಗೊಂಡಿಲ್ಲ ಎಂದು ದೂರಿದ್ದಾನೆ.`ಸರಕಾರದ ಐದು […]

Advertisement

Wordpress Social Share Plugin powered by Ultimatelysocial