ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ದುರ್ಬಳಕೆ ಆಗುತ್ತಿದೆ : ಸಚಿವ ಆರ್. ಅಶೋಕ್ ಕಿಡಿ

ಬೆಂಗಳೂರು : ಒಕ್ಕಲಿಗ ಸಮುದಾಯ ಅಷ್ಟು ಚೀಪ್ ಅಲ್ಲ. ಕಾಂಗ್ರೆಸ್, ಜೆಡಿಎಸ್ ನವರು ಪದೇ ಪದೇ ಒಕ್ಕಲಿಗ ಜಾತಿ ವಿಚಾರ ಬೀದಿಗೆ ತಂದು ರಂಪಾಟ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ದುರ್ಬಳಕೆ ಆಗುತ್ತಿದೆ. ಡಿ.ಕೆ. ಶಿವಕುಮಾರ್, ಜಮೀರ್ ಅಹ್ಮದ್ ಖಾನ್ ಗೆ ಒಳ್ಳೆಯದಾಗಲಿ, ಒಕ್ಕಲಿಗ ಸಮುದಾಯ ಅನ್ನ ಕೊಡುವ ಸಮುದಾಯ, ಕುವೆಂಪು ಹುಟ್ಟಿದ ಸಮುದಾಯದವರಾದ ನಾವು ವಿಶ್ವಮಾನವನಾಗಿರಬೇಕು ಎಂದು ಹೇಳಿದ್ದಾರೆ.

ಕಳೆದ 1 ವಾರದಿಂದ ಪರ ವಿರೋಧ ಚರ್ಚೆಯಿಂದ ನೋವಾಗಿದೆ. ನಾನೂ ಒಬ್ಬ ಒಕ್ಕಲಿಗ ನಾನು ತುಂಬಾ ನೋವಿನಿಂದ ಹೇಳುತ್ತಿದ್ದೇನೆ. ಒಕ್ಕಲಿಗ ಸಮುದಾಯ ಒಂದೇ ಪಕ್ಷದ ಜೊತೆಗೆ ಇರುತ್ತೇ ಎನ್ನಲಾಗಲ್ಲ. ಜಾತಿ ಹೆಸರಿನಲ್‌ಇ ಸಿಎಂ ಆಗಲು ಸಾಧ್ಯನಾ? ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯ ತಮ್ಮ ಬ್ರ್ಯಾಂಡ್ ರೀತಿ ಕಚ್ಚಾಡುತ್ತಿದ್ದಾರೆ. ಕುಮಾರಸ್ವಾಮಿ-ಡಿ.ಕೆ. ಶಿವಕುಮಾರ್ ಜಗಳದಲ್ಲಿ ಬಿಜೆಪಿಗೆ ಲಾಭವಾಗಲಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯಡಿಯೂರಪ್ಪ ವಿಚಾರದಲ್ಲಿ ಗೊಂದಲವಿಲ್ಲ: ಸಿ.ಟಿ. ರವಿ

Sun Jul 24 , 2022
ಬೆಂಗಳೂರು: ಯಡಿಯೂರಪ್ಪ ಚುನಾವಣೆ ನಿಲ್ಲುವುದಿಲ್ಲ ಎಂದಿದ್ದಾರೆ. ಆದರೆ ಸಕ್ರಿಯ ರಾಜಕೀಯದಿಂದ ದೂರ ಹೋಗುತ್ತೇನೆಂದು ಎಂದು ಹೇಳಿಲ್ಲ. ಅವರು ಮಾಸ್ ಲೀಡರ್, ಸಿಎಂ ಆಗಿ ಕೆಲಸ ಮಾಡಿದ್ದಾರೆ. ಉತ್ತಮ ಕಾರ್ಯ ಮಾಡಿದ್ದಾರೆ. ಪಾರ್ಟಿ ಕಟ್ಟಿದವರಲ್ಲಿ ಅವರು ಕೂಡ ಒಬ್ಬರು. ಅವರ ಹೇಳಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಪ್ರಧಾನಿಗೂ ಪಾರ್ಲಿಮೆಂಟರಿ ಬೋರ್ಡ್ ನಲ್ಲೇ ಟಿಕೆಟ್ […]

Advertisement

Wordpress Social Share Plugin powered by Ultimatelysocial