ಸರ್ಕಾರಿ ಆಡಳಿತ ಚುರುಕುಗೊಳಿಸಲು ಮತ್ತು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ಜಿಲ್ಲಾಧಿಕಾರಿಗಳು ವಾರದಲ್ಲಿ 1 ದಿನ ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು.
ಈ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ದಾವಣಗೆರೆ ನಗರದಲ್ಲಿ ಕಂದಾಯ ಸಚಿವ ಆರ್.
ಅಶೋಕ್ ಹೇಳಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಇದೆ. ಈ ವಾರದಲ್ಲಿ ಒಂದು ದಿನ ಡಿಸಿಗಳು ತಾಲೂಕಾ ಕಚೇರಿಯಲ್ಲಿ ಸೇವೆ ಸಲ್ಲಿಸಬೇಕು. ಇದು ಕಡ್ಡಾಯ. ವಿಎ ಬದಲು ವಿಇಓ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ಇಷ್ಟರಲ್ಲಿ ನಿರ್ಧಾರ ಮಾಡಲಾಗುವುದು.
ಗ್ರಾಮ ಲೆಕ್ಕಾಧಿಕಾರಿಗಳನ್ನ ಇನ್ನು ಮುಂದೆ ಗ್ರಾಮ ಕಾರ್ಯನಿರ್ವಣಾಧಿಕಾರಿ ಮಾಡಬೇಕು ಎಂಬ ಬೇಡಿಕೆ ಇದೆ. ಈ ವಿಚಾರದ ಬಗ್ಗೆಯೂ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಇಷ್ಟರಲ್ಲಿಯೇ ವಿಎ ಬದಲು ವಿಇಓ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗುವುದು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada