ನವದೆಹಲಿ;– ಪ್ರಧಾನಿ ಮೋದಿ ತೆಲಂಗಾಣವನ್ನು ಅವಮಾನಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತೆಲಂಗಾಣದ ಹುತಾತ್ಮರು, ಮತ್ತು ಅವರ ತ್ಯಾಗದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ನಲ್ಲಿ ಅಗೌರವದ ಹೇಳಿಕೆಗಳನ್ನು ನೀಡುವ ಮೂಲಕ ತೆಲಂಗಾಣ ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಎಂದರು
ಇನ್ನೂ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ಆಂಧ್ರ ಮತ್ತು ತೆಲಂಗಾಣ ವಿಭಜನೆಯು ರಕ್ತಪಾತಕ್ಕೆ ಕಾರಣವಾಯಿತು ಎಂದು ವಿಷಾದಿಸಿದ್ದರು. ಮೋದಿ ಅವರ ಹೇಳಿಕೆಗಳನ್ನು ಬಿಆರ್ಎಸ್ ಮುಖಂಡ ಕೆ.ಟಿ. ರಾಮರಾವ್ ಕೂಡ ಖಂಡಿಸಿದ್ದರು.
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಾ, ಛತ್ತೀಸ್ಗಢ, ಜಾರ್ಖಂಡ್, ಉತ್ತರಾಖಂಡ ರಾಜ್ಯಗಳು ರಚನೆಯಾದಾಗ ಎಲ್ಲರೂ ಸಂಭ್ರಮಿಸಿದ್ದರು. ಆದರೆ ತೆಲಂಗಾಣ ರಚನೆಯಾದಾಗ ರಕ್ತಪಾತವಾಯಿತು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದರು.