ಬೆಂಗಳೂರು: ಭಾರತ್ ಜೋಡೋ ಯಾತ್ರೆ ಸಂಬಂಧ ದೆಹಲಿ ಭೇಟಿಗೆ ತೆರಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಸಮಾಲೋಚನೆ ಸಾಧ್ಯತೆಯಿದೆ.
ದಾವಣಗೆರೆಯಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಬೇಕೆಂದು ಸಿದ್ದರಾಮಯ್ಯ ಬೆಂಬಲಿಗರು ಸಲಹೆ ನೀಡಿದ್ದಾರೆ.
ಈ ವಿಚಾರವನ್ನು ರಾಹುಲ್ ಗಾಂಧಿ ಜೊತೆ ಖುದ್ದು ಸಿದ್ದರಾಮಯ್ಯ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ರಾಹುಲ್ ಗಾಂಧಿಗೂ ಆಹ್ವಾನ ನೀಡುವುದರ ಜೊತೆಗೆ ಸಮಾವೇಶದ ಬಗ್ಗೆ ಚರ್ಚೆ ನಡೆಯಲಿದೆ. ಇಂದು ರಾತ್ರಿ ಇಲ್ಲವೇ ನಾಳೆ ಪ್ರತ್ಯೇಕವಾಗಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಬಣದ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಬೇಕೆಂದು ಒತ್ತಾಯಿಸುತ್ತಿರುವ ಆಪ್ತ ಬಳಗ, ಸಿದ್ದರಾಮಯ್ಯರನ್ನ ಸಿಎಂ ಅಭ್ಯರ್ಥಿ ಎಂದು ಘೋಷಿಸದೆ ಇದ್ದಲ್ಲಿ ಪಕ್ಷಕ್ಕೆ ಹಿನ್ನಡೆ ಎಂಬ ವಾದ ಮುಂದಿಟ್ಟಿದೆ. ಹಾಗಾಗಿ ಜನ್ಮ ದಿನದ ನೆಪದಲ್ಲಿ ಶಕ್ತಿ ಪ್ರದರ್ಶನಕ್ಕೆ ಆಪ್ತ ಬಳಗದಿಂದ ಭರ್ಜರಿ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada