ಆಳುವ ಸರ್ಕಾರ ಈ ವಾತಾವರಣವನ್ನು ಸೃಷ್ಟಿಸಿದೆ’ : ರಾಹುಲ್ ಗಾಂಧಿ

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್‌ಗೆ ತಮ್ಮ ಮೇಲಿನ ಎಲ್ಲಾ ದೂರುಗಳನ್ನು ಒಂದೇ ಕಡೆ ವರ್ಗ ಮಾಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಪ್ರವಾದಿಗಳ ವಿರುದ್ಧ ಮಾಡಿರುವ ಹೇಳಿಕೆ ಒಂದು ಕೀಳು ಮಟ್ಟದ ಪ್ರಚಾರ ಪಡೆಯುವ ಉದ್ದೇಶ ಹೊಂದಿರಬೇಕು ಅಥವಾ ನೀಚ ಕೆಲಸದ ಉದ್ದೇಶ ಹೊಂದಿರಬೇಕು ಎಂದು ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ದೇಶದಲ್ಲಿ ಕೋಪ ಮತ್ತು ದ್ವೇಷದ ವಾತಾವರಣವನ್ನು ಆಡಳಿತ ಸರ್ಕಾರ ಸೃಷ್ಟಿಸುತ್ತಿದೆಯೇ ಹೊರತು ಯಾರೋ ಒಬ್ಬ ವ್ಯಕ್ತಿಯಿಂದಲ್ಲ ಎಂದಿದ್ದಾರೆ.

ಈ ಕುರಿತು ಕೇರಳದ ವಯನಾಡಿನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, “ಸುಪ್ರೀಂ ಕೋರ್ಟ್ ಈ ರೀತಿ ಹೇಳಿದೆ. ಆದರೆ ದೇಶದಲ್ಲಿ ವಾತಾವರಣವನ್ನು ಸೃಷ್ಟಿಸಿರುವುದು ಆಡಳಿತಾರೂಢ ಸರ್ಕಾರ. ಈ ಹೇಳಿಕೆ ನೀಡಿದ್ದು ವ್ಯಕ್ತಿಯಲ್ಲ. ಇದು ಪ್ರಧಾನಿ, ಗೃಹ ಸಚಿವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಠಿಸಿದ ವಾತಾವರಣ. ಈ ಕೋಪದ ವಾತಾವರಣ ಮತ್ತು ಈ ದ್ವೇಷದ ವಾತಾವರಣ ಭಾರತ ಮತ್ತು ನಮ್ಮ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಪ್ರವಾದಿ ಕುರಿತು ನೀಡಿದ ಹೇಳಿಕೆ ಕುರಿತು ಇಂದು ಸುಪ್ರೀಂ ಕೋರ್ಟ್‌ ನೂಪುರ್ ಶರ್ಮಾರನ್ನು ತರಾಟೆಗೆ ತೆಗೆದುಕೊಂಡಿತು. ಅವರ ಬೇಜವಾಬ್ದಾರಿ ಹೇಳಿಕೆಗಳು ಇಡೀ ದೇಶವನ್ನು ಹೊತ್ತಿ ಉರಿಯುವಂತೆ ಮಾಡಿತು. ಪ್ರವಾದಿ ಮುಹಮ್ಮದ್ ವಿರುದ್ಧ ಆಕೆಯ ಟೀಕೆಗಳು “ಅಗ್ಗದ ಪ್ರಚಾರ, ನೀಚ ಕೆಲಸದ ಉದ್ದೇಶ ಹೊಂದಿರಬೇಕು ” ಎಂದು ನ್ಯಾಯಾಲಯ ಹೇಳಿದೆ.

ತಮ್ಮ ಸಂಸದೀಯ ಕ್ಷೇತ್ರಕ್ಕೆ ಭೇಟಿ ನೀಡಿರುವ ಮಾಜಿ ಕಾಂಗ್ರೆಸ್ ಮುಖ್ಯಸ್ಥರು ವಯನಾಡ್‌ನಲ್ಲಿರುವ ತಮ್ಮ ಕಚೇರಿಯ ಮೇಲೆ ನಡೆದ ದಾಳಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಇದು ದುರದೃಷ್ಟಕರ, ಇದು ನನ್ನ ಕಚೇರಿಯಲ್ಲ, ಇದು ವಯನಾಡಿನ ಜನರಿಗೆ ಸೇರಿದ್ದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರುಳಕುಡಿಯನ್ನು ಕೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅಮ್ಮ.

Fri Jul 1 , 2022
  ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮ, ತನ್ನ ಮೂರು ವರ್ಷದ ಕಂದನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಾಯಿಯ ದೀಪಾ (31) ಮತ್ತು ಹೆಣ್ಣು ಮಗು ರಿಯಾ ಎಂದು ಗುರುತಿಸಲಾಗಿದೆ. ಗಂಡ ಮನೆಯಲ್ಲಿಲ್ಲದ ವೇಳೆ ವೇಲಿನಿಂದ ಮಗುವನ್ನು ಕೊಂದು ನಂತರ ತಾನೂ ನೇಣಿಗೆ ಶರಣಾಗಿದ್ದಾಳೆ. ಸಾಯುವ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆಯಲಾಗಿದೆ. […]

Advertisement

Wordpress Social Share Plugin powered by Ultimatelysocial