ಬೆಂಗಳೂರು: ಟ್ವಿಟ್ಟರ್ ಮೂಲಕ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಶೇರ್ ಮಾಡಿದಂತ ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ( Rahul Gandhi ) ವಿರುದ್ಧ, ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗೆ ದೂರು ನೀಡಲಾಗಿದೆ.
ಈ ಸಂಬಂಧ ಗಿರೀಶ್ ಭಾರಧ್ವಜ್ ಎನ್ನುವವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ. ಇದು ನ್ಯಾಯಾಂಗ ನಿಂದನೆಯಾಗಲಿದೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಅಂದಹಾಗೇ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರು ಎಸಿಬಿ ಅಧಿಕಾರಿಗಳ ಬಗ್ಗೆ ಮಾತನಾಡಿದ್ದಕ್ಕೆ ವರ್ಗಾವಣೆ ಬೆದರಿಕೆ ಬಂದಿದೆ ಎನ್ನುವ ವಿಷಯವಾಗಿ, ಕೋರ್ಟ್ ಕಲಾಪದಲ್ಲಿ ಮಾತನಾಡಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಅಲ್ಲದೇ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತ ಪಡಿಸಿದ್ದರು. ಇದೇ ವೀಡಿಯೋವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಟ್ಟಿಟ್ಟರ್ ನಲ್ಲಿಯೂ ಶೇರ್ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಇದೀಗ ಈ ವೀಡಿಯೋ ಹಂಚಿಕೊಂಡಿದ್ದರ ಬಗ್ಗೆ ಅವರ ವಿರುದ್ಧ ದೂರು ನೀಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada