ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಶಿವನ ವಿಗ್ರಹ ನೀಡಿದ ಮುಸ್ಲಿಂ ಮಹಿಳೆ

 

 

 ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯ ಇಂದು ಹರಿಯಾಣದಲ್ಲಿ ಕೊನೆಗೊಳ್ಳಲಿದೆ. ನಾಳೆ (ಡಿಸೆಂಬರ್ 24) ಬೆಳಿಗ್ಗೆ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸಲಿದೆ. ದೆಹಲಿಯ ಪ್ರಮುಖ ಮಾರ್ಗಗಳಲ್ಲಿ ವ್ಯಾಪಕ ಬಂದೋಬಸ್ತ್‌ ಅನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದೆಹಲಿಗೆ ಪ್ರವೇಶಿಸುತ್ತಿರುವ ಯಾತ್ರೆಗೆ ಅದ್ದೂರಿಯಾಗಿ ಸ್ವಾಗತ ಕೋರಲಾಗುವುದು ಎಂದು ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ. ಕೋವಿಡ್‌ನ ಹೊಸ ತಳಿಯ ಆತಂಕದ ನಡುವೆಯೇ, ಯಾತ್ರೆಗೆ ಜನಬೆಂಬಲ ದೊರೆಯುತ್ತಿದೆ. ದೇಶದಾದ್ಯಂತ ಹಲವು ರಾಜಕೀಯ ನಾಯಕರು, ಸಿನಿ ಕಲಾವಿದರು, ಸಾಮಾಜಿಕ ಹೋರಾಟಗಾರರು, ಸಾಹಿತಿಗಳು, ಬರಹಗಾರರು ಸೇರಿದಂತೆ ಸಾವಿರಾರು ಮಂದಿ ರಾಹುಲ್‌ ಜೊತೆ ಹೆಜ್ಜೆ ಹಾಕಿದ್ದಾರೆ.ಇಂದು ಮುಂಜಾನೆ ಹರಿಯಾಣದ ಸೋಹ್ನಾದ ಖೇರ್ಲಿ ಲಾಲಾದಿಂದ ಯಾತ್ರೆ ಆರಂಭವಾಗಿದೆ. ಇದರಲ್ಲಿ ಎಲ್ಲ ಜಾತಿ ಧರ್ಮದವರೂ ಭಾಗವಹಿಸಿದ್ದಾರೆ. ವಿಶೇಷವೆಂದರೆ, ಬುರ್ಖಾಧಾರಿ ಮುಸ್ಲಿಂ ಮಹಿಳೆಯೊಬ್ಬರು ರಾಹುಲ್‌ ಗಾಂಧಿ ಅವರಿಗೆ ‘ಶಿವನ ವಿಗ್ರಹ’ವನ್ನು ನೀಡಿದ್ದಾರೆ. ಇದನ್ನು ರಾಹುಲ್‌ ಗಾಂಧಿ ನಗುತ್ತಲೇ ಪಡೆದುಕೊಂಡಿದ್ದಾರೆ. ಈ ಕ್ಷಣಗಳಿಗೆ ಡಿಎಂಕೆ ನಾಯಕಿ, ಸಂಸದೆ ಕನ್ನಿಮೋಳಿ ಸಾಕ್ಷಿಯಾಗಿದ್ದಾರೆ.ಈ ಸಂದರ್ಭದಲ್ಲಿ ಕ್ಲಿಕ್ಕಿಸಲಾದ ಫೋಟೊವನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ‘ಈಶ್ವರ ಅಲ್ಲಾ ತೆರೋ ನಾಮ್‌’ ಎಂದು ಬರೆಯಲಾಗಿದೆ.ರಾಹುಲ್‌ ಜೊತೆ ಹೆಜ್ಜೆ ಹಾಕಿದ ಡಿಎಂಕೆ ನಾಯಕಿಇಂದು ಹರಿಯಾಣದಲ್ಲಿ ಸಾಗುತ್ತಿರುವ ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಜೊತೆ ಡಿಎಂಕೆ ನಾಯಕಿ ಕನ್ನಿಮೋಳಿ ಹೆಜ್ಜೆ ಹಾಕಿದ್ದಾರೆ. ನಗುತ್ತಲೇ ಜನರತ್ತ ಕೈಬೀಸಿದ್ದಾರೆ. ಖ್ಯಾತ ನಟ ಕಮಲ್‌ ಹಾಸನ್‌ ಅವರು ದೆಹಲಿಯಲ್ಲಿ ನಡೆಯುವ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಪಕ್ಷ ಹೇಳಿದೆ. ಪ್ಯಾರಾ ಒಲಂಪಿಕ್‌ ಕ್ರೀಡಾಪಟು ಕಂಚನ್‌ ಲಖನಿ ಅವರು ರಾಹುಲ್‌ ಗಾಂಧಿಗೆ ಇಂದು ಜೊತೆಯಾಗಿದ್ದಾರೆ. ವೀಲ್‌ಚೇರ್‌ನಲ್ಲಿಯೇ ರಾಹುಲ್‌ ಜೊತೆ ಸಾಗಿದ್ದಾರೆ. ಅವರೊಂದಿಗೆ ರಾಹುಲ್‌ ತೆಗೆಸಿಕೊಂಡಿರುವ ಫೋಟೊಗಳನ್ನು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್​ v/s ಸೌತ್ ಸಿನಿಮಾ ಇಂಡಸ್ಟ್ರಿ ಫೈಟ್​! ರಾಕಿ ಭಾಯ್​ ಹೇಳಿದ್ದೇನು?

Fri Dec 23 , 2022
ಕೆಜಿಎಫ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಾಕಿಂಗ್​ ಸ್ಟಾರ್​ ಯಶ್  ಬಾಲಿವುಡ್​ ವರ್ಸಸ್​ ಸೌತ್​ ಸಿನಿಮಾ ಇಂಡಸ್ಟ್ರಿ ನಡುವೆ ನಡೆಯುತ್ತಿರುವ ಫೈಟ್ ಬಗ್ಗೆ ಮಾತಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತಾಡಿದ ನಟ ಯಶ್, ಎಲ್ಲಾ ಚಿತ್ರರಂಗಕ್ಕೂ  ಗೌರವ ನೀಡಬೇಕು ಎಂದು ಹೇಳಿದ್ದಾರೆ. ಕನ್ನಡಿಗರು ಬೇರೆ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತಾಡಬಾರದು ಎಂದು ಯಶ್​ ಹೇಳಿದ್ದಾರೆ.ಕನ್ನಡ ಜನರು ಯಾರನ್ನು ಕೀಳಾಗಿ ಕಾಣಬಾರದುಫಿಲ್ಮ್ ಕಂಪ್ಯಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ನಟ ಯಶ್​ ಅನೇಕ ವಿಚಾರಗಳ […]

Advertisement

Wordpress Social Share Plugin powered by Ultimatelysocial