ಬೆಂಗಳೂರು-ಬೆಳಗಾವಿ ನಡುವೆ `ವಂದೇ ಭಾರತ್’ ರೈಲು ಸಂಚಾರ ಆರಂಭ.

ಬೆಳಗಾವಿ : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರು-ಬೆಳಗಾವಿಗೆ ಸಂಚಾರ ಆರಂಭಿಸಲಿದೆ ಎನ್ನಲಾಗಿದೆ.ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ‌ ಕಲ್ಪಿಸಲಿದೆ.ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ರೈಲು ಧಾರವಾಡಕ್ಕೂ ವಿಸ್ತರಣೆಯಾಗುವುದು ಖಚಿತ ಆಗಿದೆ. ಬೆಂಗಳೂರು ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆಗೊಳ್ಳುವ ಸಾದ್ಯತೆ ಇದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಮಾಹಿತಿ ನೀಡಿದ್ದಾರೆ.ಈಗಾಗಲೇ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ಶೀಘ್ರವೇ ಬೆಂಗಳೂರು-ಹುಬ್ಬಳ್ಳಿ-ಬೆಳಗಾವಿಗೆ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರೊ. ಸಿ. ಎನ್. ರಾಮಚಂದ್ರನ್ ಮಹಾನ್ ವಿದ್ವಾಂಸರು

Sun Jan 8 , 2023
ರಾಮಚಂದ್ರನ್ 1936ರ ಜನವರಿ 8ರಂದು ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ ಜನಿಸಿದರು. ತಂದೆ ನಾಗಪ್ಪ ಶಾಸ್ತ್ರಿ, ತಾಯಿ ಪದ್ಮಾವತಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಅಲ್ಲದೆ ನ್ಯಾಯಶಾಸ್ತ್ರದಲ್ಲಿ ಎಲ್.ಎಲ್.ಬಿ. ಪದವಿಯನ್ನು ಪಡೆದರು. ಮುಂದೆ ಅವರು ಅಮೆರಿಕದ ಮಿಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಗಳಿಸಿದರು. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಪ್ರಾಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ ರಾಮಚಂದ್ರನ್ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, 1996ರಲ್ಲಿ ಪ್ರೊಫೆಸರ್ ಎಮಿರೆಟಸ್ ಆಗಿ […]

Advertisement

Wordpress Social Share Plugin powered by Ultimatelysocial