ಬೆಳಗಾವಿ : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರು-ಬೆಳಗಾವಿಗೆ ಸಂಚಾರ ಆರಂಭಿಸಲಿದೆ ಎನ್ನಲಾಗಿದೆ.ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸಲಿದೆ.ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ರೈಲು ಧಾರವಾಡಕ್ಕೂ ವಿಸ್ತರಣೆಯಾಗುವುದು ಖಚಿತ ಆಗಿದೆ. ಬೆಂಗಳೂರು ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆಗೊಳ್ಳುವ ಸಾದ್ಯತೆ ಇದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಮಾಹಿತಿ ನೀಡಿದ್ದಾರೆ.ಈಗಾಗಲೇ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ಶೀಘ್ರವೇ ಬೆಂಗಳೂರು-ಹುಬ್ಬಳ್ಳಿ-ಬೆಳಗಾವಿಗೆ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada