ಜೂನ್ 2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

 

ಬೆಂಗಳೂರು : ನೈರುತ್ಯ ಮುಂಗಾರು ಭಾನುವಾರ ಕೇರಳಕ್ಕೆ ಪ್ರವೇಶಿಸಿದ್ದು, ಜೂನ್ 1 ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2 ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಮಳೆ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳ ಪ್ರವೇಶಿಸಿದೆ.

ಮುಂಗಾರು ಕೇರಳ ಪ್ರವೇಶಿಸಿದ ನಾಲ್ಕೈದು ದಿನಗಳಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 2 ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 2 ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

KGF - 2 ಮತ್ತೊಂದು ರೆಕಾರ್ಡ್ - 'ಬಾಹುಬಲಿ 2' ದಾಖಲೆ ಉಡೀಸ್

Mon May 30 , 2022
ನ್ಯಾಷನಲ್ ಸ್ಟಾರ್ ಯಶ್ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ `ಕೆಜಿಎಫ್ 2′ ಗೆಲುವಿನ ನಾಗಲೋಟದಲ್ಲಿದೆ. ಸದ್ಯ ಯಶ್ ಸಿನಿಮಾ ಹೊಸ ದಾಖಲೆ ಬರೆದಿದ್ದು, ಬಾಹುಬಲಿ 2ಗೆ ಸೆಡ್ಡು ಹೊಡೆದು ಮುಂದೆ ಬಂದಿದೆ. ಗಳಿಕೆಯ ವಿಚಾರದಲ್ಲಿ ಬಾಹುಬಲಿ 2 ಚಿತ್ರವನ್ನ ಕೆಜಿಎಫ್ 2 ಇನ್ನು ಮುಟ್ಟಿಲ್ಲ. ಆದರೆ ಟಿಕೆಟ್ ವಿಚಾರದಲ್ಲಿ ಬಾಹುಬಲಿ 2 ಸಿನಿಮಾವನ್ನು ಮೀರಿಸಿದೆ. `ಕೆಜಿಎಫ್ 2′ ಟಿಕೆಟ್ ಮಾರಾಟ ಆಗಿರುವ ವಿಚಾರದಲ್ಲಿ ಹೊಸ ಸಮೀಕ್ಷೆ ಹೊರ ಬಿದ್ದಿದೆ. ಟಿಕೆಟ್ […]

Advertisement

Wordpress Social Share Plugin powered by Ultimatelysocial