ಮಳೆ ತಗ್ಗಿದರೂ ನಿಲ್ಲದ ಅವಾಂತರ

 

ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಕೊಂಚ ಕಡಿಮೆಯಾಗಿದೆ..ಮಳೆ ಕಡಿಮೆಯಾದ್ರೂ ಕುಮಟ, ಹೊನ್ನಾವರ ತಾಲೂಕಿನ ಗ್ರಾಮಗಳಲ್ಲಿ ಪ್ರವಾಹ ಆತಂಕ ತಣ್ಣಗಾಗಿಲ್ಲ.

ಧಾರಾಕಾರ ಮಳೆಯಿಂದ ಅಘನಾಶಿನಿ, ಶರಾವತಿ ನದಿಗಳು ಉಕ್ಕಿ ಹರಿಯುತ್ತಿವೆ..ಕೊನ್ನಳ್ಳಿ, ಊರಕೇರಿ,ಮೂರೂರು ಗ್ರಾಮದಲ್ಲಿ ಮನೆಗಳಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ.

ಇನ್ನು, ತೋಟ, ಗದ್ದೆಗಳಿಗೆ‌ ಪ್ರವಾಹದ ನೀರು ನುಗ್ಗಿ ಕೃಷಿ ಜಮೀನುಗಳು ಜಲಾವೃತಗೊಂಡಿವೆ..ಇತ್ತ, ಹಾವೇರಿ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗ್ತಿದ್ದು, ನೋಡು ನೋಡುತ್ತಿದ್ದಂತೆ ಮನೆಯ ಗೋಡೆ ಕುಸಿದು ಬಿದ್ದಿದೆ..

ಹಿರೆಕೇರೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಬೃಹತ್ ಗೋಡೆ ಕುಸಿತಕ್ಕೆ
ಸುಮಾರು 1 ಲಕ್ಷ ಮೌಲ್ಯದ ಬೈಕ್​​ಗಳು ಜಖಂಗೊಂಡಿವೆ..ಮನೆಗೋಡೆ ಕುಸಿಯುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

6 ತಿಂಗಳ ಹಿಂದಷ್ಟೇ ಸಂಚಾರಕ್ಕೆ ಮುಕ್ತವಾಗಿದ್ದ ಕೆಳಸೇತುವೆಯ ರಸ್ತೆ

Sun Jul 17 , 2022
  ಬಾಗಲಕೋಟೆ: ನಿರಂತರ ಮಳೆಯಿಂದಾಗಿ ಕೆಳಸೇತುವೆಯ ರಸ್ತೆ ತಡೆಗೋಡೆ ಕುಸಿದಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ-ಗದಗ ಜಿಲ್ಲೆ ಕೊಣ್ಣೂರ ಮಧ್ಯದ ಹಳ್ಳದ ಸೇತುವೆಯ ತಡೆಗೋಟೆ ಕುಸಿದಿರುವುದರಿಂದ ಜನರು ಪರದಾಡುವಂತಾಗಿದೆ. ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ ಇದಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಅನುಮತಿ ದೊರೆತಿತ್ತು, ಆರು ತಿಂಗಳ ಹಿಂದೆಯಷ್ಟೇ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಿತ್ತು. ಸದ್ಯ ಗೋವನಕೊಪ್ಪ-ಕೊಣ್ಣುರು ಸಂಪರ್ಕ ಕಡಿತಗೊಂಡಿದ್ದು, ಕಳಪೆ […]

Advertisement

Wordpress Social Share Plugin powered by Ultimatelysocial