ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ.

ಬೆಂಗಳೂರು: ಉತ್ತರ ಭಾರತದಲ್ಲಿ ದಾಖಲೆಯ ಬಿಸಿಲು, ಬಿಸಿ ಗಾಳಿಯಿಂದ ಜನ ತತ್ತರಿಸಿದ್ದು, ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ.

ಭಾನುವಾರ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಬಿಡದಿಯಲ್ಲಿ ಸಿಡಿಲು ಬಡಿದು 10 ಕುರಿ, 6 ಮೇಕೆ ಸಾವನ್ನಪ್ಪಿವೆ.

ಮೈಸೂರು ಭಾಗದಲ್ಲಿ ಮಳೆ ಮುಂದುವರೆದಿದ್ದು, ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ವಳಲೆಕಟ್ಟೆಕೊಪ್ಪಲಿನಲ್ಲಿ ಸಿಡಿಲು ಬಡಿದು 53 ವರ್ಷದ ಮಾಸ್ತಮ್ಮ ಮೃತಪಟ್ಟಿದ್ದಾರೆ. ಕುಂಬಾರಕೊಪ್ಪಲು ಹಾಗೂ ಚಿನಕುರಳಿ ಗ್ರಾಮದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.

ಬೇಲೂರು ತಾಲ್ಲೂಕಿನ ಕೃಷ್ಣಾಪುರದಲ್ಲಿ ಸಿಡಿಲು ಬಡಿದು ರಂಗನಾಯಕ(79) ಮೃತಪಟ್ಟಿದ್ದಾರೆ. ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಅವರು ಸಾವನ್ನಪ್ಪಿದ್ದಾರೆ.

ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿದ್ದರೂ ಭಾರಿ ಮಳೆ, ಗುಡುಗು-ಸಿಡಿಲಿನ ಕಾರಣ ಜೀವಹಾನಿ ಸೇರಿ ಅಪಾರ ನಷ್ಟವುಂಟಾಗಿದೆ. ಮೈಸೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

ಮುಂದಿನ ಮೂರುದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮೇ 3 ಮತ್ತು 4ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೇ 2ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೂಮಿತಾಯಿಯನ್ನು "ಜೀವಂತ ವ್ಯಕ್ತಿ' ಎಂದು ಘೋಷಿಸಿದ ಹೈಕೋರ್ಟ್‌

Mon May 2 , 2022
  ಚೆನ್ನೈ:ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮದ್ರಾಸ್‌ ಹೈಕೋರ್ಟ್‌ “ಪೇರೆನ್ಸ್‌ ಪೇಟ್ರಿಯಾ ಜ್ಯೂರಿಸ್‌ಡಿಕ್ಷನ್‌’ ಅಧಿಕಾರವನ್ನು ಬಳಸಿಕೊಂಡು “ಪ್ರಕೃತಿ ಮಾತೆ’ಯನ್ನು ಜೀವಂತ ವ್ಯಕ್ತಿ ಎಂದು ಘೋಷಿಸಿದೆ. ಈ ಮೂಲಕ ಜೀವಂತ ವ್ಯಕ್ತಿಗಿರುವ ಎಲ್ಲ ಹಕ್ಕುಗಳು, ಕರ್ತವ್ಯಗಳು ಹಾಗೂ ಹೊಣೆಗಾರಿಕೆಯು ಈಗ ಭೂತಾಯಿಗೆ ದೊರೆತಂತಾಗಿದೆ. ಪ್ರಕೃತಿಯನ್ನು ಉಳಿಸುವ ಮತ್ತು ಸಂರಕ್ಷಿಸುವ ಉದ್ದೇಶದಿಂದ ಹೈಕೋರ್ಟ್‌ ಇಂಥದ್ದೊಂದು ನಿರ್ಧಾರ ಕೈಗೊಂಡಿದೆ. ಸರ್ಕಾರಿ ಜಮೀನಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ನ್ಯಾ. ಎಸ್‌. ಶ್ರೀಮತಿ ಅವರು, “ಹಿಂದಿನ […]

Advertisement

Wordpress Social Share Plugin powered by Ultimatelysocial