ನಿರಂತರವಾಗಿ ಸುರಿದ ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ ರೈತರ ಜಮೀನುಗಳಲ್ಲಿ ನೀರು ನುಗ್ಗಿದ್ದು, ಅನೇಕ ಬೆಳೆಗಳು ಹಾನಿಗೊಳಗಾಗಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿದ ರೈತರು ಹಾಕಿದ ಬಂಡವಾಳವು ತೆಗೆದುಕೊಳ್ಳಲಾಗದಂತ ಪರಿಸ್ಥಿತಿಗೆ ಸಿಲುಕಿದ್ದಾರೆ.ವಿವಿಧ ಗ್ರಾಮಗಳಿಗೆ ಜೆಡಿಎಸ್ ಶಾಸಕ ಬಂಡೆಪ್ಪ ಕೃಷಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು,ಕೃಷಿ ಅಧಿಕಾರಿಗಳು, ಸಂಬಂಧಿಸಿದ ಸಚಿವರು ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು.ಸರ್ಕಾರ ರೈತರ ನೆರವಿಗೆ ಬರಬೇಕಾಗಿದೆ.
ಬೀದರ್ ಜಿಲ್ಲೆಯಲ್ಲಿ ಮಳೆ ಆರ್ಭಟ-ಸ್ಥಳಕ್ಕೆ ಜೆಡಿಎಸ್ ಶಾಸಕ ಬಂಡೆಪ್ಪ ಭೇಟಿ
Please follow and like us: