ನವದೆಹಲಿ:ಮುಂದಿನ ದಿನಗಳಲ್ಲಿ ಯಾವುದೇ ಸಮಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ 10 ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರವು ಸಿದ್ಧವಾಗಿದೆ. ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಯಾವುದೇ ಸಮಯದಲ್ಲಿ ನೇರವಾಗಿ ಹಣವನ್ನು ಸ್ವೀಕರಿಸುತ್ತಾರೆ .
ಆದಾಗ್ಯೂ, ಆಯ್ದ ರೈತರು 10 ನೇ ಕಂತಿನೊಂದಿಗೆ ರೂ 2000 ಬದಲಿಗೆ ರೂ 4000 ಪಡೆಯಬಹುದು.ಪಿಎಂ-ಕಿಸಾನ್ (Pm-kisan)ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ 6000 ರೂ.
ನ್ನು ಪ್ರತಿ ಕಂತಿಗೆ 2000 ರೂಪಾಯಿಯಂತೆ ಮೂರು ವಿಭಿನ್ನ ಕಂತುಗಳಲ್ಲಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.ಪ್ರಸ್ತುತ, ಭಾರತದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11.37 ಕೋಟಿಗೂ ಹೆಚ್ಚು ರೈತರು ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿದ್ದಾರೆ. ಈ ರೈತರು ಈಗ 10 ನೇ ಕಂತಿನ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಡಿಸೆಂಬರ್ 25 ರೊಳಗೆ ರೈತರು 2000 ರೂ ಕಂತುಗಳನ್ನು ಪಡೆಯಬಹುದು ಎಂದು ಮಾಧ್ಯಮ ವರದಿಗಳು ಸೂಚಿಸುತ್ತವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada