ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ 11 ನೇ ಕಂತು ಪಡೆಯಲು ಇ-ಕೆವೈಸಿ ಗಡುವು ವಿಸ್ತರಣೆ

 

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ 11 ನೇ ಕಂತು ಬಿಡುಗಡೆ ಮಾಡಲಾಗುವುದು.

ಇದುವರೆಗೆ ಈ ಯೋಜನೆಯ 10 ಕಂತುಗಳು ರೈತರ ಖಾತೆಗೆ ಬಂದಿವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರು 11 ನೇ ಕಂತಿಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಯೋಜನೆಯ ಪ್ರಯೋಜನಗಳನ್ನು ಪಡೆಯಲು e -KYC ಕಡ್ಡಾಯವಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ಗಡುವು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್(pmkisan.gov.in) ನಲ್ಲಿ ನೀಡಲಾಗಿದೆ. ಮಾಹಿತಿಯ ಪ್ರಕಾರ, ಈಗ e -KYC ಅನ್ನು ಮೇ 22, 2022 ರವರೆಗೆ ಪೂರ್ಣಗೊಳಿಸಬಹುದು. ಮೊದಲು ಮಾರ್ಚ್ 31 ರೊಳಗೆ ಇ -ಕೆವೈಸಿ ಪೂರ್ಣಗೊಳಿಸಬೇಕೆಂದು ಹೇಳಲಾಗಿತ್ತು.

ಶೀಘ್ರದಲ್ಲೇ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತು ಕೂಡ ಬಿಡುಗಡೆಯಾಗಲಿದೆ. ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ, ರೈತರು ಕಿಸಾನ್ ಕಾರ್ನರ್‌ನಲ್ಲಿ ಇ-ಕೆವೈಸಿ ಪೂರ್ಣಗೊಳಿಸಬೇಕಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡಬೇಕು. ಮೊಬೈಲ್, ಕಂಪ್ಯೂಟರ್ ಅಥವಾ ಲ್ಯಾಪ್‌ ಟಾಪ್‌ನಿಂದಲೂ ನೀವು ಮನೆಯಲ್ಲಿ ಕುಳಿತು ಈ ಕೆಲಸವನ್ನು ಮಾಡಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದ ರೈತರಿಗೆ ಮಹತ್ವದ : PM ಕಿಸಾನ್ KYC ಜೋಡಣೆ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್‌

Tue Mar 29 , 2022
ನವದೆಹಲಿ: ಪ್ರಧಾನಮಂತ್ರಿ ಕಿ ಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಸೇರ್ಪಡೆಗೊಂಡ ರೈತರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಹೌದು, PM ಕಿಸಾನ್ ವೆಬ್‌ಸೈಟ್‌ನಲ್ಲಿನ ಫ್ಲ್ಯಾಶ್ ಪ್ರಕಾರ, ‘ಎಲ್ಲಾ PMKISAN ಫಲಾನುಭವಿಗಳಿಗೆ eKYC ಯ ಗಡುವನ್ನು 22 ನೇ ಮೇ 2022 ರವರೆಗೆ ವಿಸ್ತರಿಸಲಾಗಿದೆ.ವೆಬ್‌ಸೈಟ್ ಪ್ರಕಾರ, ‘PMKISAN ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. ದಯವಿಟ್ಟು ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ ಫಾರ್ಮರ್ ಕಾರ್ನರ್‌ನಲ್ಲಿ eKYC ಆಯ್ಕೆಯನ್ನು ಮತ್ತು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹತ್ತಿರದ […]

Advertisement

Wordpress Social Share Plugin powered by Ultimatelysocial