ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿದ್ದರಾಮಯ್ಯ ಅಡ್ಡಕಸುಬಿ ಬಜೆಟ್ ಎಂದು ಟ್ವೀಟ್ ಮೂಲಕ ಬಜೆಟ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಟೀಕೆಗೆ ರಾಜ್ಯ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ.ರಾಜಕೀಯ ಟೀಕೆಗಳು ಮರ್ಯಾದೆಯ ಗೆರೆ ದಾಟಬಾರದು.ಆದರೆ ಸಿದ್ದರಾಮಯ್ಯ ಅವರು ರಾಜ್ಯದ ಆಯವ್ಯಯವನ್ನೇ ಅಡ್ಡಕಸುಬಿ ಬಜೆಟ್ ಎಂದು ವ್ಯಾಖ್ಯಾನಿಸಿದ್ದಾರೆ. ಪ್ರಜಾಪ್ರಭುತ್ವದ ರೀತಿ ರಿವಾಜುಗಳಿಗೆ ವಿರುದ್ಧವಾದ ಹೇಳಿಕೆಯನ್ನು ಸಿದ್ದರಾಮಯ್ಯರಿಂದ ರಾಜ್ಯದ ಜನರು ನಿರೀಕ್ಷಿಸಿರಲಿಲ್ಲ. ಇದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಬಿಜೆಪಿ ಟೀಕಿಸಿದೆ.ವಿಪಕ್ಷ ನಾಯಕ ಸಿದ್ದರಾಮಯ್ಯ, ಅವರು ದಿನದಿಂದ ದಿನಕ್ಕೆ ಹತಾಶೆಯ ಮಡುವಿಗೆ ಜಾರುತ್ತಿದ್ದಾರೆ ಎಂಬುದಕ್ಕೆ ಅವರ ಮಾತುಗಳೇ ಸಾಕ್ಷಿ. ಬಜೆಟ್ ಬಗ್ಗೆ ಸಿದ್ರಾಮಯ್ಯ ಆಡಿದ ಮಾತು ಅವರ ಘನತೆಗೆ ತಕ್ಕುದಲ್ಲ. ಸಿದ್ದರಾಮಯ್ಯನವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ “ಅಡ್ಡಕಸುಬಿ” ಎಂದು ಯಾರಾದರೂ ಕರೆದರೆ, ನಿಮಗೆ ನೋವಾಗಬಹುದೇ? ಎಂದು ಪ್ರಶ್ನಿಸಿದೆ.ನಿಮ್ಮ ರಾಜಕೀಯ ಪ್ರೇರಿತ ಗೊಡ್ಡು ಪಾದಯಾತ್ರೆಗೆ ಬೆದರಿ ಬಜೆಟ್ನಲ್ಲಿ ಮೇಕೆದಾಟು ಯೋಜನೆಗೆ ಹಣ ಮೀಸಲಿರಿಸಿದ್ದಲ್ಲ. ಮೇಕೆದಾಟು ಯೋಜನೆ ಅನುಷ್ಠಾನ ನಮ್ಮ ಬದ್ಧತೆ, ಅದಕ್ಕಾಗಿ ಹಣ ಮೀಸಲಿರಿಸಿದ್ದೇವೆ. ನಿಮ್ಮಿಂದ ಇದು ಸಾಧ್ಯವಾಗಿಲ್ಲ ಎಂಬುದಕ್ಕಾಗಿ ನೀವು ನಾಚಿಗೆ ಪಟ್ಟುಕೊಳ್ಳಬೇಕು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada