‘ಕಬ್ಜ’ ಸಾಂಗ್​ ರಿಲೀಸ್​​​ಗೆ ರಾಜಮೌಳಿ ಗೈರಿ: ಕಾರಣ ತಿಳಿಸಿದ ನಿರ್ದೇಶಕ

ಪೇಂದ್ರ ಹಾಗೂ ಸುದೀಪ್ ನಟನೆಯ ‘ಕಬ್ಜ’ ಸಿನಿಮಾದ ಮೊದಲ ಸಾಂಗ್ ರಿಲೀಸ್ ಕಾರ್ಯಕ್ರಮ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ರಾತ್ರಿ 7 ಗಂಟೆಗೆ ಈ ಕಾರ್ಯಕ್ರಮ ಆರಂಭ ಆಗಲಿದ್ದು, ಈಗಾಗಲೇ ಇದಕ್ಕಾಗಿ ಬರ್ಜರಿ ಸಿದ್ಧತೆ ನಡೆಯುತ್ತಿದೆ.

ಕಬ್ಜ ಸಿನಿಮಾದ ಟೀಸರ್ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಕಜ್ಬ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಆಗಮಿಸಬೇಕಿತ್ತು. ಆದರೆ ರಾಜಮೌಳಿ ಆಗಮಿಸಲು ಸಾಧ್ಯವಾಗುತ್ತಿಲ್ಲ.

ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರು ಫೆಬ್ರವರಿ 3ರಂದು ನಿಧನ ಹೊಂದಿದರು. ರಾಜಮೌಳಿ ಸೇರಿ ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದರು. ವಿಶ್ವನಾಥ್ ಅವರನ್ನು ಕಳೆದುಕೊಂಡ ನೋವಿನಿಂದ ರಾಜಮೌಳಿ ಅವರು ಹೊರ ಬಂದಿಲ್ಲ. ಈ ಕಾರಣಕ್ಕೆ ಅವರು ‘ಕಬ್ಜ’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ, ಗಣ್ಯರ ಉಪಸ್ಥಿತಿಯಲ್ಲಿ ಕೆಲವು ಬದಲಾವಣೆ ಆಗಲಿದೆ ಎಂದು ಕಬ್ಜ ಸಿನಿಮಾ ತಂಡ ತಿಳಿಸಿದೆ.

‘ಕಬ್ಜ’ ಸಿನಿಮಾ ತಂಡ ಪ್ರಮೋಷನ್​ಗೆ ದೊಡ್ಡ ಮಟ್ಟದ ಪ್ಲ್ಯಾನ್ ರೂಪಿಸಿಕೊಂಡಿದೆ. ಈ ಕಾರಣಕ್ಕೆ ತಂಡ ಮತ್ತೆ ಹೈದರಾಬಾದ್​ಗೆ ತೆರಳಲಿದೆ. ಮುಂದಿನ ದಿನಗಳಲ್ಲಿ ‘ಕಬ್ಜ’ ಚಿತ್ರದ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಇದು ಪೂರ್ವ ನಿರ್ಧರಿತ ಕಾರ್ಯಕ್ರಮ ಆಗಿರುವುದರಿಂದ ಖ್ಯಾತ ನಿರ್ದೇಶಕ ಕೆ. ವಿಶ್ವನಾಥ್ ಅವರಿಗೆ ಮೌನಾಚರಣೆ ಕೋರಿ ‘ಕಬ್ಜ’ ಸಾಂಗ್ ರಿಲೀಸ್ ಮಾಡಲಾಗುತ್ತಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆತ ಸಿನಿಮಾ ಇಂಡಸ್ಟ್ರಿಯಲ್ಲಿ ಒಬ್ಬ ಸೂಪರ್‌ ಸ್ಟಾರ್‌ ಹೀರೋ.

Sat Feb 4 , 2023
ಆತ ಸಿನಿಮಾ ಇಂಡಸ್ಟ್ರಿಯಲ್ಲಿ ಒಬ್ಬ ಸೂಪರ್‌ ಸ್ಟಾರ್‌ ಹೀರೋ. ಮಾಡಿದ ಸಿನಿಮಾವೆಲ್ಲ ಬ್ಲಾಕ್‌ ಬಸ್ಟರ್‌ ಆಗಿದ್ದರಿಂದ, ಸಹಜವಾಗಿಯೇ ಇವನ ಜೊತೆ ಸಿನಿಮಾ ಮಾಡಲು ನಿರ್ಮಾಪಕರು, ನಿರ್ದೇಶಕರು ತುದಿಗಾಲಿನಲ್ಲಿರುತ್ತಾರೆ. ಆದರೆ ಇವನೋ ಹೇಳಿ-ಕೇಳಿ ತಿಕ್ಕಲು ಸ್ವಭಾವದವನು. ಸ್ವಲ್ಪ ಹೆಚ್ಚು- ಕಡಿಮೆಯಾದರೂ ತನ್ನೊಂದಿಗೆ ಸಿನಿಮಾ ಮಾಡುವ ನಿರ್ಮಾಪಕರು, ನಿರ್ದೇಶಕರನ್ನು ತನ್ನ ಕು(ಕಪಿ)ಚೇಷ್ಟೆಯಿಂದ ಹೈರಾಣಾಗಿಸದೆ ಬಿಡಲಾರ. ಮುಂದೆ ಎಲ್ಲರಿಂದ ಹೊಗಳಿಸಿಕೊಳ್ಳುವ, ಹಿಂದಿನಿಂದ ಹಿಡಿ ಶಾಪ ಹಾಕಿಸಿಕೊಳ್ಳುವ ಇಂಥ ಸೂಪರ್‌ ಸ್ಟಾರ್‌ ಹೀರೋ ಒಬ್ಬ ಕುರುಡಿ […]

Advertisement

Wordpress Social Share Plugin powered by Ultimatelysocial