ಐಪಿಎಲ್ ಇತಿಹಾಸದ ಎಲಿಮಿನೇಟರ್ ಪಂದ್ಯದಲ್ಲಿ ಇದುವರೆಗೆ ಕಳಪೆ ಪ್ರದರ್ಶನ ನೀಡುತ್ತಾ ಬಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಐಪಿಎಲ್ 2022 ರ (IPL 2022) ಮೊದಲ ಅಗ್ನಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದೆ. ಲಖನೌ ಸೂಪರ್ ಜೇಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ (LSG vs RCB) ಬೊಂಬಾಟ್ ಪ್ರದರ್ಶನ ನೀಡಿ 14 ರನ್ಗಳಿಂದ ಜಯ ಸಾಧಿಸಿ ಕ್ವಾಲಿಫೈಯರ್-2 ಗೆ ಲಗ್ಗೆಯಿಟ್ಟಿದೆ. ಬೆಂಗಳೂರು ಈ ಪಂದ್ಯದಲ್ಲಿ ಗೆಲುವು ಸಾಧಿಸಲು ರಜತ್ ಪಟಿದಾರ್ (Rajat Patidar) ಎಂದರೆ ತಪ್ಪಾಗಲಾರದು. ಮೊದಲ ಓವರ್ನಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಕಳೆದುಕೊಂಡಾಗ ಕ್ರೀಸ್ಗೆ ಬಂದ ಇವರು ಲಖನೌ ಬೌಲರ್ಗಳ ಬೆಂಡೆತ್ತಿ ಆಕರ್ಷಕ ಚೊಚ್ಚಲ ಶತಕ ಸಿಡಿಸಿ ಅಬ್ಬರಿಸಿದರು. ಆರ್ಸಿಬಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು. ಕೇವಲ 54 ಎಸೆತಗಳಲ್ಲಿ 12 ಫೋರ್ ಹಾಗೂ 7 ಅಮೋಘ ಸಿಕ್ಸರ್ಗಳನ್ನು ಸಿಡಿಸಿ ಅಜೇಯ 112 ರನ್ ಗಳಿಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ರಜತ್ ಏನು ಹೇಳಿದರು ಕೇಳಿ.
ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ಮಾತನಾಡಿದ ಪಟಿದಾರ್ ಮಹತ್ವದ ಹೇಳಿಕೆ ನೀಡಿದರು. ಮೊದಲಿಗೆ ತನ್ನ ಆಟದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಇವರು, “ನಾನು ಬಾಲ್ಗೆ ಟೈಮ್ ಮಾಡುವಾಗ ನನ್ನ ಗಮನ ಪೂರ್ತಿ ಅದರ ಮೇಲೆ ಮಾತ್ರ ಇರುತ್ತಿತ್ತು. ಪವರ್ ಪ್ಲೇಯ ಕೊನೆಯ ಓವರ್ ಅನ್ನು ಕ್ರುನಾಲ್ ಪಾಂಡ್ಯ ಬೌಲಿಂಗ್ ಮಾಡಿದಾಗ ನನ್ನ ಉದ್ದೇಶ ಸ್ಪಷ್ಟವಾಗಿತ್ತು. ಹಾಗೂ ಆತ್ಮವಿಶ್ವಾಸದಿಂದ ಇದ್ದೆ. ಈ ವಿಕೆಟ್ ಮಾತ್ರ ಅದ್ಭುತವಾಗಿತ್ತು. ಅದಕ್ಕಾಗಿ ನನಗೆ ಕೆಲ ಅತ್ಯುತ್ತಮ ಹೊಡೆತ ಸಿಡಿಸಲು ಕಾರಣವಾಯಿತು. ಡಾಟ್ ಬಾಲ್ ಅನ್ನು ಸರಿಯಾಗಿ ಎದುರಿಸುವ ಸಾಮರ್ಥ್ಯ ನನ್ನಲ್ಲಿರುವ ಕಾರಣ ನಾನು ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ,” ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada