ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ದಿವ್ಯಾ ಸುರೇಶ್…ಸ್ಪೆಷಲ್ ರೋಲ್ ನಲ್ಲಿ ಮಿಂಚಲಿದ್ದಾರೆ ಬಿಗ್ ಬಾಸ್ ಚೆಲುವೆ

ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದ ಬಿಗ್ ಬಾಸ್ ಬ್ಯೂಟಿ ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟಿಸ್ತಿರುವ ಬಹುನಿರೀಕ್ಷಿತ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.

ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್

ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರು ಆತ್ಮೀಯ ಸ್ನೇಹಿತರು. ಇಬ್ಬರು ಒಟ್ಟಿಗೆ ನಟಿಸುವ ಅವಕಾಶ ಹಿರಣ್ಯ ಸಿನಿಮಾ ಮೂಲಕ ನನಸಾಗ್ತಿದೆ ಅನ್ನೋದು ಬಿಗ್ ಬಾಸ್ ಬ್ಯೂಟಿ ದಿವ್ಯಾ ಮಾತು. ಇದೇ 9 ರಿಂದ ದಿವ್ಯಾ ಸುರೇಶ್ ಭಾಗದ ಶೂಟಿಂಗ್ ಶುರುವಾಗ್ತಿದೆ.

ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿಘ್ನೇಶ್ವರ ಯು ಮತ್ತು ವಿಜಯ್ ಕುಮಾರ್ ಬಿವಿ ಹಿರಣ್ಯ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಅತಿಯಾದ ಟೋಮೋಟೊ ಸೇವನೆಯಿಂದ ಕಾಡಬಹುದು ಅನಾರೋಗ್ಯ

Sat Mar 5 , 2022
ಟೋಮೋಟೋ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಅನೇಕರು ಟೋಮೋಟೋವನ್ನು ಹೆಚ್ಚಾಗಿ ಬಳಕೆ ಮಾಡ್ತಾರೆ. ಟೋಮೋಟೋ ಆರೋಗ್ಯಕ್ಕೆ ಒಳ್ಳೆಯದು. ಆದ್ರೆ ಅತಿಯಾಗಿ ತಿಂದ್ರೆ ಅನಾರೋಗ್ಯ ಕಾಡುತ್ತದೆ. ಹೆಚ್ಚು ಟೋಮೋಟೋ ತಿನ್ನುವುದರಿಂದ ಗ್ಯಾಸ್ಟ್ರಿಕ್ ಆಮ್ಲ ಉತ್ಪತ್ತಿಯಾಗುತ್ತದೆ. ಎದೆಯುರಿ ಸಮಸ್ಯೆ ಕಾಡುತ್ತದೆ. ಅಜೀರ್ಣ ಸಮಸ್ಯೆಯಿದ್ದರೆ ತಕ್ಷಣ ಟೋಮೋಟೋ ಸೇವನೆ ಬಿಡುವುದು ಒಳ್ಳೆಯದು. ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿರುವ ಜನರು ಟೋಮೋಟೋದಿಂದ ಸಂಪೂರ್ಣವಾಗಿ ದೂರವಿರಬೇಕು. ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಇರುತ್ತದೆ. ಇದು ಮೂತ್ರಪಿಂಡದ ರೋಗಿಗಳಿಗೆ ಹಾನಿಕಾರಕವಾಗಿದೆ. ಕೀಲು ನೋವು […]

Advertisement

Wordpress Social Share Plugin powered by Ultimatelysocial