ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳನ್ನು ಆರಂಭಿಸುತ್ತೇವೆ.ಶಾಲೆಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿದ್ಧತೆ ಕೈಗೊಳ್ಳಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಶಾಲೆಗಳನ್ನು ಗುರುತಿಸಲಾಗಿದ್ದು, ಪೊಲೀಸ್ ಬಿಗಿಭದ್ರತೆಯಲ್ಲಿ ಶಾಲೆಗಳನ್ನು ಆರಂಭಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್-ಕೇಸರಿ ಶಾಲು ವಿವಾದದ ಕುರಿತಾಗಿ ಹೈಕೋರ್ಟ್ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ಶೀಘ್ರವೇ ಕಾಲಾ-ಕಾಲೇಜು ಆರಂಭಿಸಿ ಎಂದು ಸೂಚಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada