ನಟ ರಾಜೇಶ್ 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್‌ ನಿಧನ….

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.ಬೆಂಗಳೂರು: ಹಿರಿಯ ರಾಜೇಶ್ ಇಂದು (ಶನಿವಾರ, ಫೆ.19) ಮುಂಜಾನೆ ನಿಧನರಾಗಿದ್ದಾರೆ.

ಅವರ ಕುರಿತು ಹಾಗೂ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಈ ದಿನ ದುಃಖಕರವಾದ ದಿನ ಎಂದಿರುವ ಅರ್ಜುನ್ ಸರ್ಜಾ, ”ಕನ್ನಡ ಚಿತ್ರರಂಗದಲ್ಲಿ 50 ವರ್ಷಕ್ಕೂ ಹೆಚ್ಚು ಇದ್ದವರು ರಾಜೇಶ್. ಡಾ.ರಾಜ್‌ಕುಮಾರ್​ರವರ ಪಂಕ್ತಿಯವರು. ಮನಸ್ಸಿಗೆ ಕಷ್ಟವಾಗುತ್ತಿದೆ” ಎಂದು ಹೇಳಿದ್ದಾರೆ. ರಾಜೇಶ್ ಅವರ ಕೊನೆಯ ದಿನಗಳ ಕುರಿತು ಮಾಹಿತಿ ನೀಡಿದ ಅರ್ಜುನ್ ಸರ್ಜಾ, ”10 ದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. ಮೊದಲಿಗೆ ಪ್ರೋ ಕೋವಿಡ್ ಆಮೇಲೆ ಸಿಕೆಡಿ ಸಮಸ್ಯೆ ಆಗಿತ್ತು. ತುಂಬಾ ಸುಸ್ತು ಎಂದು ಅಡ್ಮಿಟ್ ಆಗಿದ್ದರು. ಬಹಳ ಪ್ರಯತ್ನ ಪಟ್ಟೆವು. ಆದರೆ ಫಲಿತಾಂಶ ಸಿಗಲಿಲ್ಲ. ಮುಂಜಾನೆ 2.20ಕ್ಕೆ ಅವರು ಇಹಲೋಕ ತ್ಯಜಿಸಿದ್ದಾರೆ” ಎಂದಿದ್ದಾರೆ.

ವಿದ್ಯಾರಣ್ಯಪುರ ಸ್ವನಿವಾಸದಲ್ಲಿ ಪೂಜೆ ನಡೆಯಲಿದೆ. 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಮಧ್ಯಾಹ್ನ 3.30ಕ್ಕೆ ಮೇಡಿ ಅಗ್ರಹಾರ ಲಕ್ಷ್ಮೀಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆಯಬಹುದು ಎಂದು ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ 'ಕಲಾತಪಸ್ವಿ' ರಾಜೇಶ್(84)​ ಇನ್ನು ನೆನಪು ಮಾತ್ರ.

Sat Feb 19 , 2022
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್(84)​ ಇನ್ನು ನೆನಪು ಮಾತ್ರ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಫೆ.19) ಕೊನೆಯುಸಿರೆಳೆದಿದ್ದಾರೆ.ವೀರ ಸಂಕಲ್ಪ’ ಸಿನಿಮಾ ಮೂಲಕ ಪಾದಾರ್ಪಣೆ ಮಾಡಿದ ರಾಜೇಶ್ ಅವರು ಸೊಸೆ ತಂದ ಸೌಭಾಗ್ಯ, ಬಿಡುಗಡೆ, ಕ್ರಾಂತಿವೀರ, ವಿಷಕನ್ಯೆ, ದೇವರ ದುಡ್ಡು, ಕಲಿಯುಗ, ವಸಂತ ನಿಲಯ, ದೇವರ ಮನೆ, ತವರು ಮನೆ, ಭಲೇ ಭಾಸ್ಕರ, ನಮ್ಮ ಬದುಕು, ದೇವರ ಮಕ್ಕಳು, ಕಾಣಿಕೆ, ಎರಡು […]

Advertisement

Wordpress Social Share Plugin powered by Ultimatelysocial