ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್ ವಿವಾದವನ್ನು ವಿಧಾನಸಭೆಯಲ್ಲಿ ಚರ್ಚಿಸಿ ಗದ್ದಲ ಎಬ್ಬಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ, ಇದರ ಜೊತೆಗೆ ಕೇಸರಿ ಧ್ವಜದ ಬಗ್ಗೆ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ಸಂಬಂಧ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಟ್ಟು ಹಿಡಿದಿದೆ.ಈ ಹಿನ್ನೆಲೆಯಲ್ಲಿ ಶುಕ್ರವಾರ ನವದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕತ್ವವು ರಾಜ್ಯ ನಾಯಕರನ್ನು ಚರ್ಚೆಗೆ ಆಹ್ವಾನಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಪರಿಷತ್ತಿನ ಬಿಕೆ ಹರಿಪ್ರಸಾದ್ ಮತ್ತು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಸೇರಿದಂತೆ ರಾಜ್ಯ ನಾಯಕರನ್ನು ಭೇಟಿ ಮಾಡಲಿದ್ದಾರೆ.2023ರ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚಿಸಲು ಹಾಗೂ ನೀಲನಕ್ಷೆ ತಯಾರಿಸಲು ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ ಆದರೆ ಮೂಲಗಳ ಪ್ರಕರಾ ಹಿಜಾಬ್ ವಿವಾದದ ಬಗ್ಗೆ ಸಮಾಲೋಚನೆ ನಡೆಸಲು ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada