ರಾಜ್ಯ ಕಾಂಗ್ರೆಸ್ ನಾಯಕರಿಂದ ಶುಕ್ರವಾರ ರಾಹುಲ್ ಗಾಂಧಿ ಭೇಟಿ: ಹಿಜಾಬ್ ವಿವಾದದ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್ ವಿವಾದವನ್ನು ವಿಧಾನಸಭೆಯಲ್ಲಿ ಚರ್ಚಿಸಿ ಗದ್ದಲ ಎಬ್ಬಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ, ಇದರ ಜೊತೆಗೆ ಕೇಸರಿ ಧ್ವಜದ ಬಗ್ಗೆ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ಸಂಬಂಧ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಟ್ಟು ಹಿಡಿದಿದೆ.ಈ ಹಿನ್ನೆಲೆಯಲ್ಲಿ ಶುಕ್ರವಾರ ನವದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕತ್ವವು ರಾಜ್ಯ ನಾಯಕರನ್ನು ಚರ್ಚೆಗೆ ಆಹ್ವಾನಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಪರಿಷತ್ತಿನ ಬಿಕೆ ಹರಿಪ್ರಸಾದ್ ಮತ್ತು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಸೇರಿದಂತೆ ರಾಜ್ಯ ನಾಯಕರನ್ನು ಭೇಟಿ ಮಾಡಲಿದ್ದಾರೆ.2023ರ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚಿಸಲು ಹಾಗೂ ನೀಲನಕ್ಷೆ ತಯಾರಿಸಲು ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ ಆದರೆ ಮೂಲಗಳ ಪ್ರಕರಾ ಹಿಜಾಬ್ ವಿವಾದದ ಬಗ್ಗೆ ಸಮಾಲೋಚನೆ ನಡೆಸಲು ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ: ಭಜರಂಗದಳ ಕಾರ್ಯಕರ್ತನ ಹತ್ಯೆಯ ನಂತರ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ;

Mon Feb 21 , 2022
ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕರ್ನಾಟಕದ ಶಿವಮೊಗ್ಗ ಪಟ್ಟಣದಲ್ಲಿ ಭಾನುವಾರ ರಾತ್ರಿ ಭಜರಂಗದಳಕ್ಕೆ ಸೇರಿದ ಕಾರ್ಯಕರ್ತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಅವರ ಸಾವಿನ ನಂತರ ಜಿಲ್ಲಾಡಳಿತ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಪಟ್ಟಣದ ಭಾರತಿ ಕಾಲೋನಿಯ ರವಿವರ್ಮ ಲೇನ್‌ನಲ್ಲಿ 23 ವರ್ಷದ ಹರ್ಷ ಎಂಬ ಕಾರ್ಯಕರ್ತನ ಮೇಲೆ ಅಪರಿಚಿತ […]

Advertisement

Wordpress Social Share Plugin powered by Ultimatelysocial