ರಾಜ್ಯಪಾಲರನ್ನು ಭೇಟಿಯಾದ ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ವಿವಾದಾತ್ಮಕ ಹೇಳಿಕೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಛೀಮಾರಿ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ರಾಜ್ಯಪಾಲರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ವಿಧಾನಮಂಡಲದ ಒಳಗು ಹಾಗೂ ಹೊರಗು ಪ್ರತಿಭಟನೆ ನಡೆಸಿದ್ದು, ಈ ನಡುವೆ ಸಚಿವ ಈಶ್ವರಪ್ಪ ಅವರಿಗೆ ಕರೆ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಇಂತಹ ಹೇಳಿಕೆ ಒಪ್ಪಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಈ ಬೆಳವಣಿಗೆಗಳ ಮಧ್ಯೆ ಇದೀಗ ಸಚಿವ ಈಶ್ವರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ರಾಜ್ಯಪಾಲರು ನನ್ನನ್ನು ಭೇಟಿಗೆ ಕರೆದಿರಲಿಲ್ಲ. ನಾನಾಗಿಯೇ ಭೇಟಿ ಮಾಡಿದ್ದೇನೆ. ಕುವೆಂಪು ವಿವಿ ಸಮಸ್ಯೆ ವಿಚಾರವಾಗಿ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ವಿಶ್ವ ನಂ. 1 ಮ್ಯಾಗ್ನಸ್ ಕಾರ್ಲ್ಸೆನ್ ಅವರನ್ನು ಸೋಲಿಸಿದ 16 ವರ್ಷದ ಭಾರತೀಯ ಗ್ರ್ಯಾಂಡ್ಮಾಸ್ಟರ್!

Tue Feb 22 , 2022
ಹದಿಹರೆಯದ ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಗ್ನಾನಂದ ಅವರು ಏರ್‌ಥಿಂಗ್ಸ್ ಮಾಸ್ಟರ್ಸ್ ಆನ್‌ಲೈನ್ ರ್ಯಾಪಿಡ್ ಚೆಸ್ ಪಂದ್ಯಾವಳಿಯ ಎಂಟನೇ ಸುತ್ತಿನಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ದಂಗುಬಡಿಸಿದರು, ನಾರ್ವೇಜಿಯನ್ ಸೂಪರ್‌ಸ್ಟಾರ್ ವಿರುದ್ಧ ಗೆಲುವು ಸಾಧಿಸಿದ ದೇಶದ ಮೂರನೇ ಆಟಗಾರರಾದರು. 16 ವರ್ಷದ ಪ್ರಾಡಿಜಿಯನ್ನು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಅಖಿಲ ಭಾರತ ಚೆಸ್ ಫೆಡರೇಶನ್ ಅಧ್ಯಕ್ಷ ಸಂಜಯ್ ಕಪೂರ್ ಸೇರಿದಂತೆ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಶ್ಲಾಘಿಸಿದ್ದಾರೆ, ಅವರು ಕಾರ್ಲ್‌ಸನ್ […]

Advertisement

Wordpress Social Share Plugin powered by Ultimatelysocial