ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ 12 ರಂದು ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಸೇವಕರವರೆಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಮನೆಗೆ ಭೇಟಿ ನೀಡಿ ಸರ್ಕಾರಿ ಸೌಲಭ್ಯ, ದಾಖಲಾತಿಗಳನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.
ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 12 ರಂದು ಮನೆ ಮನೆಗೆ ಅಧಿಕಾರಿಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದ ಮೂಲಕ ಪಹಣಿ, ಖಾತೆ, ಭೂ ದಾಖಲೆ ಸೇರಿ ಇನ್ನಿತರ ದಾಖಲೆಗಳನ್ನು ಸಂಬಂಧಪಟ್ಟವರ ಮನೆಗೆ ತೆರಳಿ ಅಧಿಕಾರಿಗಳು ಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada
Please follow and like us:
Sat Mar 5 , 2022
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಸಿನಿಮಾರಂಗಕ್ಕೆ ಎಂಟ್ರಿ ನೀಡಿದ್ದು, ಆ ಸಿನಿಮಾಗೆ ‘ಮಾಯಾಬಜಾರ್’ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್ 4ರಂದು ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನೆರವೇರಿದೆ.ವಿಶೇಷವೆಂದರೆ ಕಿರೀಟಿ ಹೀರೋ ಆಗಿರುವ ಮೊದಲ ಸಿನಿಮಾಕ್ಕೆ ‘ಬಾಹುಬಲಿ’, ‘ಪುಷ್ಪ’ ಸಿನಿಮಾಗಳಿಗೆ ಕೆಲಸ ಮಾಡಿದ ತಂತ್ರಜ್ಞರು ಕೆಲಸ ಮಾಡಲಿದ್ದಾರೆ. ತೆಲುಗಿನಲ್ಲಿ ‘ಈಗ’, ‘ಲೆಜೆಂಡ್’, ‘ಯುದ್ಧಂ ಶರಣಂ’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರಪಾಟಿ ಈ ಸಿನಿಮಾವನ್ನು […]