ಇಲ್ಲಿನ ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿರುವ (Suicide Case) ಘಟನೆ ನಡೆದಿದೆ. ರಾಮಲಿಂಗ ನಾಯಕ್ (೪೯) ಆತ್ಮಹತ್ಯೆ ಮಾಡಿಕೊಂಡಿರುವ ಎಎಸ್ಐ.ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕದ ಶೆಡ್ನಲ್ಲಿ ಅವರು ನೇಣುಬಿಗಿದುಕೊಂಡಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಬೈಕ್ ನಿಲ್ಲಿಸಿ ಶೆಡ್ಗೆ ಹೊಂದಿಕೊಂಡಿರುವ ಕಂಬಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಒಬಿಸಿ ೩ಎ ಮೀಸಲಾತಿ ಹೊಂದಿದ್ದ ಒಕ್ಕಲಿಗರಿಗೆ 2ಸಿ ಹಾಗೂ ೩ಬಿ ಮೀಸಲಾತಿ ಹೊಂದಿದ್ದ ಪಂಚಮಸಾಲಿ ಸಮುದಾಯಕ್ಕೆ 2ಡಿ ಎಂದು ರಾಜ್ಯ ಸರ್ಕಾರ ಹೊಸದಾಗಿ ಪ್ರವರ್ಗ ಸೃಷ್ಟಿಸಿದೆ. ಈ ಬಗ್ಗೆ ನಮಗೆ ಪೂರ್ಣ ಮಾಹಿತಿ ಸಿಕ್ಕಿಲ್ಲ. ಮೀಸಲಾತಿ (Reservation) ಶೇಕಡಾ ಇಂತಿಷ್ಟೇ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಎಲ್ಲಿಂದ ಕೊಡುತ್ತಾರೆ ಎಂದು ತೀರ್ಮಾನವಾಗಿಲ್ಲ. ಈ ಮೀಸಲಾತಿ ಪರಿಷ್ಕರಣೆ ಎಲೆಕ್ಷನ್ ಗಿಮಿಕ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.ಪಂಚಮಸಾಲಿ, ಒಕ್ಕಲಿಗರ ಒಬಿಸಿ ಮೀಸಲಾತಿ ಪರಿಷ್ಕರಣೆ ಬಗ್ಗೆ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಸೃಜಿಸಿರುವ ಪ್ರವರ್ಗಗಳಿಗೆ ಮೀಸಲಾತಿ ಎಲ್ಲಿಂದ ಕೊಡುತ್ತಾರೆ. ಇಡಬ್ಲ್ಯುಎಸ್ನಿಂದ ಅಥವಾ ಜನರಲ್ ಕೆಟಗರಿಯಿಂದ ತೆಗೆದುಕೊಳ್ಳಬೇಕಾ ಎಂಬುದು ತೀರ್ಮಾನವಾಗಿಲ್ಲ ಎಂದು ತಿಳಿಸಿದರು.1992ರಲ್ಲಿ ಸುಪ್ರೀಂಕೋರ್ಟ್ 9 ನ್ಯಾಯಾಧೀಶರ ಪೀಠ, ಮೀಸಲಾತಿ ಶೇ.50 ಮೀರಬಾರದು ಎಂದು ತೀರ್ಪು ನೀಡಿತ್ತು. ಕೇಂದ್ರದಿಂದ ಈಗಾಗಲೇ 49.5 ರಷ್ಟು ಮೀಸಲಾತಿ ಇದೆ. ಆದರೆ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್) ಶೇ.೧೦ ಮೀಸಲಾತಿ ಕೊಟ್ಟಿದ್ದಾರೆ. ಇದರಿಂದ ಒಟ್ಟು ಮೀಸಲಾತಿ 59.5 ಆಗಿದೆ. ಇತ್ತೀಚೆಗೆ ಎಸ್ಸಿ-ಎಸ್ಟಿಗೆ ಶೇ.6 ಮೀಸಲಾತಿ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇದೆಲ್ಲ ಸೇರಿ ಎಷ್ಟು ಪ್ರತಿಶತ ಆಗುತ್ತದೆ ಎಂಬುದನ್ನು ನೋಡಿ ಆಮೇಲೆ ಮಾತನಾಡುತ್ತೇನೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada