ಕಲಬುರಗಿ: ಹಿಜಾಬ್ ದ್ವೇಷ ಭಾವನೆ ಬಿತ್ತಿದ್ದೆ ಬಿಜೆಪಿ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಾರಿಗೆ ಸಚಿವ ಶ್ರೀ ರಾಮಲು ಆಕ್ರೋಶ ವ್ಯಕ್ತಪಡಿಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ.ಕ್ರಿಕೆಟ್ ಇತರ ಕ್ರೀಡೆಗಳಲ್ಲಿ ಆಟಗಾರರು ಸ್ಕೋರ್ ಮಾಡುವ ರೀತಿ ಪೊಲಿಟಿಕಲ್ ಸ್ಕೋರ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.ಸಿದ್ದರಾಮಯ್ಯ ಅವರು ಮಾಜಿ ಸಿಎಂ ಮುಖ್ಯಮಂತ್ರಿಗಳಾಗಿದ್ದು, ಅವರ ಮಟ್ಟಕ್ಕೆ ಇಳಿಯುವ ಪ್ರಯತ್ನ ನಾನು ಮಾಡಲ್ಲ. ಹಿಜಾಬ್ ವಿಚಾರ ಕೋರ್ಟನಲ್ಲಿದೆ. ಹಾಗಾಗಿ ಈ ಹಂತದಲ್ಲಿ ನಾನು ಹೆಚ್ಚೆನು ಮಾತನಾಡಲಾರೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada