ರಾಮನಗರ ಜಿಲ್ಲಾ ಕಾರಾಗೃಹದಲ್ಲೇ ಹುಟ್ಟುಹಬ್ಬ ಆಚರಿಸಿದ ಖೈದಿ.

ಜೈಲಿನಲ್ಲಿ ಕೈದಿಗಳ ಸಂಭ್ರಮ ಜೋರಾಗಿದೆ. ಇದೀಗ ರಾಮನಗರದ ಜಿಲ್ಲಾ ಕಾರಾಗೃಹದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೈದಿಗಳ ಮೇಲೆ ಎಫ್‌ ಐಆರ್‌ ದಾಖಲಾಗಿದೆ.ರೌಡಿಶೀಟರ್ ಕಿರಣ್ ಅಲಿಯಾಸ್ ತಮಟೆ ಎಂಬಾತನ ಬರ್ತ್ ಡೇಯನ್ನು ಜೈಲಿನಲ್ಲೇ ಕೇಕ್ ಕಟ್‌ಮಾಡಿ ಆಚರಣೆ ಮಾಡಲಾಗಿತ್ತು. ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದರು. ಕೇಕ್ ಕತ್ತರಿಸಿ, ಹ್ಯಾಪಿ ಬರ್ತ್ ಡೇ ಕಿರಣ್ ಅಣ್ಣ ಎಂದು ಹೂವಿನಲ್ಲಿ ಬರೆದು ಗ್ರೂಪ್ ಫೋಟೋ ತೆಗೆದುಕೊಂಡಿರುವ ಎರಡು ಫೋಟೋಗಳು ವೈರಲ್ ಆಗಿತ್ತು.ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಜೈಲಿನ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿದೆ. ಅಲ್ಲದೇ ಜೈಲಿನ ಒಳಗಡೆ ಕೇಕ್ ತೆಗೆದುಕೊಂಡು ಹೋಗಲು ಅಧಿಕಾರಿ, ಸಿಬ್ಬಂದಿಗಳೇ ಸಾಥ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಮನಗರ ಎಸ್ಪಿ ಸಂತೋಷ್ ಬಾಬು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಜೈಲು.

Wed Jan 18 , 2023
        ಬಾಲಸೋರ್, ಜ.18- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲ 28 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪೋಸ್ಕೋ ನ್ಯಾಯಾಲಯದ ವಿಶೇಷ ನ್ಯಾಯಾೀಧಿಶ ರಂಜನ್ ಕುಮಾರ್ ಸುತಾರ್ ಅವರು ತೀರ್ಪು ನೀಡಿದ್ದು, ಆರೋಪಿ ಸಂತೋಷ್ ಸಿಂಗ್‍ನಿಗೆ 14,000 ರೂಪಾಯಿ ದಂಡದೊಂದಿಗೆ ಶಿಕ್ಷೆ ವಿಧಿಸಿದ್ದಾರೆ. ತಮ್ಮ 14 ವರ್ಷದ ಅಪ್ರಾಪ್ತ ಮಗಳ ಮೇಲೆ […]

Advertisement

Wordpress Social Share Plugin powered by Ultimatelysocial