ಜೈಲಿನಲ್ಲಿ ಕೈದಿಗಳ ಸಂಭ್ರಮ ಜೋರಾಗಿದೆ. ಇದೀಗ ರಾಮನಗರದ ಜಿಲ್ಲಾ ಕಾರಾಗೃಹದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೈದಿಗಳ ಮೇಲೆ ಎಫ್ ಐಆರ್ ದಾಖಲಾಗಿದೆ.ರೌಡಿಶೀಟರ್ ಕಿರಣ್ ಅಲಿಯಾಸ್ ತಮಟೆ ಎಂಬಾತನ ಬರ್ತ್ ಡೇಯನ್ನು ಜೈಲಿನಲ್ಲೇ ಕೇಕ್ ಕಟ್ಮಾಡಿ ಆಚರಣೆ ಮಾಡಲಾಗಿತ್ತು. ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದರು. ಕೇಕ್ ಕತ್ತರಿಸಿ, ಹ್ಯಾಪಿ ಬರ್ತ್ ಡೇ ಕಿರಣ್ ಅಣ್ಣ ಎಂದು ಹೂವಿನಲ್ಲಿ ಬರೆದು ಗ್ರೂಪ್ ಫೋಟೋ ತೆಗೆದುಕೊಂಡಿರುವ ಎರಡು ಫೋಟೋಗಳು ವೈರಲ್ ಆಗಿತ್ತು.ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಜೈಲಿನ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿದೆ. ಅಲ್ಲದೇ ಜೈಲಿನ ಒಳಗಡೆ ಕೇಕ್ ತೆಗೆದುಕೊಂಡು ಹೋಗಲು ಅಧಿಕಾರಿ, ಸಿಬ್ಬಂದಿಗಳೇ ಸಾಥ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಮನಗರ ಎಸ್ಪಿ ಸಂತೋಷ್ ಬಾಬು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://play.google.com/store/apps/details?id=com.speed.newskannada