ರಾಜ್ಯದಲ್ಲಿ ರಂಜಾನ್ ಇಂದಲ್ಲ, ನಾಳೆ – ವಕ್ಫ್ ಮಂಡಳಿ ಘೋಷಣೆ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಮೂನ್ ಕಮಿಟಿಯ ತೀರ್ಮಾನದಂತೆ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಿತ್ತು. ಆದ್ರೇ.. ಭಾನುವಾರದಂದು ಚಂದ್ರನ ದರ್ಶನವಾಗದ ಕಾರಣ, ರಂಜಾನ್ ಹಬ್ಬವನ್ನು ಸೋಮವಾರದ ಇಂದು ಆಚರಣೆ ಬದಲಾಗಿ, ಮಂಗಳವಾರದ ನಾಳೆ ಆಚರಿಸಲು ವಕ್ಫ್ ಮಂಡಳಿ ಘೋಷಿಸಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ವಕ್ಫ್ ಮಂಡಳಿ ಕೇಂದ್ರ ಚಂದ್ರ ದರ್ಶನ ಸಮಿತಿಯ ಮೌಲಾನ ಮಕ್ಸೂದ್ ಇಮ್ರಾನ್ ರಷಾದಿಯವರು, ಚಂದ್ರನ ದರ್ಶನವಾಗದ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮಂಗಳವಾರದ ನಾಳೆ ರಂಜಾನ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ, ಸೋಮವಾರ ಸಂಜೆ ನಡೆದ ಕೇಂದ್ರ ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಹಾಗೂ ದೇಶದ ಯಾವ ಭಾಗದಲ್ಲಿಯೂ ಚಂದ್ರನ ದರ್ಶನವಾದ ಬಗ್ಗೆ ವರದಿಯಾಗಿಲ್ಲ. ಹೀಗಾಗಿ ನಾಳೆ ರಂಜಾನ್ ಹಬ್ಬ ಆಚರಿಸಲು ಒಮ್ಮತದ ತೀರ್ಮಾನವನ್ನು ಸಮಿತಿಯು ಕೈಗೊಂಡಿರೋದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ !

Mon May 2 , 2022
  ಶಿವಮೊಗ್ಗ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೆಲವು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದ್ದು, ಅಲ್ಲಲ್ಲಿ ಈ ಕುರಿತ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಶಿಕಾರಿಪುರದಲ್ಲಿ ಮಾತನಾಡಿರುವ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಆಗಮಿಸುತ್ತಿರುವ ಅಮಿತ್ ಷಾ ಅವರನ್ನು ಇಂದು ಸಂಜೆ ಭೇಟಿ ಮಾಡಲಿದ್ದೇನೆ ಎಂದ ಅವರು, ಇನ್ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ […]

Advertisement

Wordpress Social Share Plugin powered by Ultimatelysocial