ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಮೂನ್ ಕಮಿಟಿಯ ತೀರ್ಮಾನದಂತೆ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಿತ್ತು. ಆದ್ರೇ.. ಭಾನುವಾರದಂದು ಚಂದ್ರನ ದರ್ಶನವಾಗದ ಕಾರಣ, ರಂಜಾನ್ ಹಬ್ಬವನ್ನು ಸೋಮವಾರದ ಇಂದು ಆಚರಣೆ ಬದಲಾಗಿ, ಮಂಗಳವಾರದ ನಾಳೆ ಆಚರಿಸಲು ವಕ್ಫ್ ಮಂಡಳಿ ಘೋಷಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ವಕ್ಫ್ ಮಂಡಳಿ ಕೇಂದ್ರ ಚಂದ್ರ ದರ್ಶನ ಸಮಿತಿಯ ಮೌಲಾನ ಮಕ್ಸೂದ್ ಇಮ್ರಾನ್ ರಷಾದಿಯವರು, ಚಂದ್ರನ ದರ್ಶನವಾಗದ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮಂಗಳವಾರದ ನಾಳೆ ರಂಜಾನ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ, ಸೋಮವಾರ ಸಂಜೆ ನಡೆದ ಕೇಂದ್ರ ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಹಾಗೂ ದೇಶದ ಯಾವ ಭಾಗದಲ್ಲಿಯೂ ಚಂದ್ರನ ದರ್ಶನವಾದ ಬಗ್ಗೆ ವರದಿಯಾಗಿಲ್ಲ. ಹೀಗಾಗಿ ನಾಳೆ ರಂಜಾನ್ ಹಬ್ಬ ಆಚರಿಸಲು ಒಮ್ಮತದ ತೀರ್ಮಾನವನ್ನು ಸಮಿತಿಯು ಕೈಗೊಂಡಿರೋದಾಗಿ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada