ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ರೈಲಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.

 

ಟಾವಾ: ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ರೈಲಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರೈಲ್ವೆ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಪೋಷಕರು ಬೈದರೆಂದು ಮನನೊಂದು ಬಾಲಕಿ ತನ್ನ ಮನೆ ಬಿಟ್ಟು ಮಹೋಬಾ ಪ್ರದೇಶದಲ್ಲಿನ ತನ್ನ ಅಜ್ಜನ ಮನೆಗೆ ಹೋಗಲೆಂದು ಜನವರಿ 15 ರಂದು ರೈಲು ಹತ್ತಿದಳು.

ಎಲ್ಲಾ ಪ್ರಯಾಣಿಕರು ಇಟಾವಾದಲ್ಲಿ ರೈಲಿನಿಂದ ಇಳಿದರು ಆದರೆ ಹುಡುಗಿ ಅಲ್ಲಿಯೇ ಕುಳಿತಿದ್ದಳು. ಈ ವೇಳೆ ರೈಲನ್ನು ಸ್ವಚ್ಛಗೊಳಿಸಲು ಬಂದ ಆರೋಪಿ ಪೌರಕಾರ್ಮಿಕ ರೈಲಿನಲ್ಲಿಯೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮರುದಿನ ಬೆಳಿಗ್ಗೆ, ಬಾಲಕಿ ಇಟಾವಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಲ್ಲಿ ಒಬ್ಬರಿಗೆ ತನ್ನ ಕುಟುಂಬ ಸದಸ್ಯರಿಗೆ ಕರೆ ಮಾಡಲು ಮತ್ತು ನನ್ನನ್ನು ಇಲ್ಲಿಂದ ಮನೆಗೆ ಹಿಂತಿರುಗಿಸುವಂತೆ ಕೇಳಿಕೊಂಡಳು. ಅಲ್ಲಿದ್ದವರು ಬಾಲಕಿಗೆ ಸಹಾಯ ಮಾಡಿದ್ದು, ಆಕೆಯ ಮನೆ ತಲುಪಿಸಿದ್ದಾರೆ.

ಮನೆಗೆ ಬಂದ ಬಾಲಕಿ ಅತ್ಯಾಚಾರದ ಘಟನೆಯ ಬಗ್ಗೆ ತಿಳಿಸಿದಳು. ಇದರಿಂದ ಆಘಾತಕ್ಕೊಳಗಾಅದ ಪೋಷಕರು ಇಟಾವಾ ರೈಲ್ವೆ ನಿಲ್ದಾಣಕ್ಕೆ ಹೋಗಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ರಾಜ್ ಕಪೂರ್ ಯಾದವ್ ಎಂದು ಗುರುತಿಸಲಾಗಿದೆ. ಈತ ಇಟಾವಾ ರೈಲ್ವೆಯ ಕ್ಯಾರೇಜ್ ಮತ್ತು ವ್ಯಾಗನ್ ವಿಭಾಗದಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾನೆ. ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಗಣಿನಾಡು ಬಳ್ಳಾರಿಯಲ್ಲಿ ತಲೆ ಎತ್ತಲಿದೆ 23 ಅಡಿ ಎತ್ತರದ ಅಪ್ಪು ಪುತ್ಥಳಿ.

Thu Jan 19 , 2023
ಬಳ್ಳಾರಿ, ಜನವರಿ, 19: ಜನವರಿ 21ರಂದಿ ಬಳ್ಳಾರಿ ಉತ್ಸವ ನಡೆಯಲಿದ್ದು, ಅಂದೇ 23 ಅಡಿ ಎತ್ತರದ ಡಾ.ಪುನೀತ್‌ ರಾಜ್‌ಕುಮಾರ್‌ ಪುತ್ಥಳಿ ಅನಾವರಣಗೊಳ್ಳಲಿದೆ. ಲಕ್ಷಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿರುವ ಡಾ.ಪುನೀತ್ ರಾಜ್‍ಕುಮಾರ್ ಅಂದರೆ ಬಳ್ಳಾರಿ ಜನರಿಗೆ ಎಲ್ಲಿಲ್ಲದ ಪ್ರೀತಿ, ಅಭಿಮಾನ. ಅಪ್ಪು ಇಹಲೋಕವನ್ನು ತ್ಯಜಿಸಿದಾಗ ಇಲ್ಲಿನ ಜನರು ತಮ್ಮ ಮನೆಯ ಮಗನನ್ನೇ ಕಳೆದುಕೊಂಡ ಹಾಗೆ ದುಃಖಿತರಾಗಿದ್ದರು. ಗಣಿನಾಡಲ್ಲಿ ತಲೆ ಎತ್ತಲಿದೆ ಅಪ್ಪು ಪುತ್ಥಳಿ ಈಗ ಪ್ರೀತಿ, ಅಭಿಮಾನಕ್ಕೆ ಸಾಕ್ಷಿಯಾಗಿ ಗಣಿನಾಡು ಬಳ್ಳಾರಿಯಲ್ಲಿ […]

Advertisement

Wordpress Social Share Plugin powered by Ultimatelysocial