ಅಲ್ಲಿ ಯುವತಿ ಮೇಲೆ ಅತ್ಯಾಚಾರ, ಇಲ್ಲಿ ಹುಡುಗಿ ಮೇಲೆ ಆಯಸಿಡ್ ಅಟ್ಯಾಕ್!

 

ಯಾದಗಿರಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಹಾಗೂ ಯಾದಗಿರಿಯಲ್ಲಿ  ಇಡೀ ದೇಶವೇ ತಲೆತಗ್ಗಿಸುವ ಅಮಾನವೀಯ ಕೃತ್ಯ ನಡೆದಿದೆ. ಯಾದಗಿರಿಯಲ್ಲಿ ಆಟೋ ಚಾಲಕನೊಬ್ಬ (Auto Driver) ಯುವತಿ (Lady) ಮೇಲೆ ಅತ್ಯಾಚಾರ ಮಾಡಿದ್ದಾನೆ.
ಅಷ್ಟೇ ಅಲ್ಲ. ಆತನ ಸ್ನೇಹಿತ (Friend) ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್‌ನಲ್ಲಿ (Mobile) ವಿಡಿಯೋ ರೆಕಾರ್ಡ್  ಮಾಡಿಕೊಂಡಿದ್ದಾನೆ. ಇತ್ತ ಬೆಂಗಳೂರಲ್ಲಿ ಭಗ್ನ ಪ್ರೇಮಿಯೊಬ್ಬ (Lover) ಹಾಡಹಗಲೇ, ಜನನಿಬಿಡ ಪ್ರದೇಶದಲ್ಲಿ ಯುವತಿ ಮೇಲೆ ಆಯಸಿಡ್ ದಾಳಿ   ನಡೆಸಿದ್ದಾನೆ. ಈ ಎರಡು ಘಟನೆಗಳಿಂದ ರಾಜ್ಯದ ಜನರು ಬೆಚ್ಚಿ ಬಿದ್ದಿದ್ದಾರೆ.

ಯಾದಗಿರಿಯಲ್ಲಿ ಆಟೋ ಚಾಲಕನಿಂದ ಅತ್ಯಾಚಾರ

ಯಾದಗಿರಿ ಜಿಲ್ಲೆಯಲ್ಲಿ ಆಟೋ ಚಾಲಕನೊಬ್ಬ ಹಾಡಹಗಲೇ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಆಟೋ ಚಾಲಕ ಹನುಮಂತ ಜಿನಕೇರಿ ಎಂಬಾತ ಅತ್ಯಾಚಾರ ಮಾಡಿದ್ದಾನೆ. ಏಪ್ರಿಲ್ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆಟೋದಲ್ಲಿ ಸ್ನೇಹಿತನನ್ನು ಕೂರಿಸಿಕೊಂಡು ಕೃತ್ಯ

ಯಾದಗಿರಿ ತಾಲೂಕಿನ ಹಳ್ಳಿಯೊಂದರ ಯುವತಿ ಮನೆ ಕೆಲಸ ಮಾಡುತ್ತಿದ್ದಳು. ಅಟೋದಲ್ಲಿ ಯಾದಗಿರಿಗೆ ಎಪ್ರಿಲ್ 26 ರಂದು ಯುವತಿ ತೆರಳುತ್ತಿದ್ದಳು. ಈ ವೇಳೆ ಎಂ.ಹೊಸಳ್ಳಿ ಗ್ರಾಮದ ಅಟೋ ಚಾಲಕ ಹನುಮಂತ ಜಿನಕೇರಿ ಎಂಬಾತ ಹೊಸಳ್ಳಿ ಗ್ರಾಮದ ಸ್ನೇಹಿತ ನರಸಪ್ಪ ಎಂಬಾತನನ್ನು ಆಟೋದಲ್ಲಿ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಯುವತಿ ಮೇಲೆ ಅತ್ಯಾಚಾರಕ್ಕೆ ಪ್ಲಾನ್ ಮಾಡಿದ್ದಾನೆ.

ಪಾಳು ಬಿದ್ದ ಮನೆಗೆ ಕರೆದೊಯ್ದು ಮಾನಗೇಡಿ ಕೃತ್ಯ

ಆಟೋ ನಿಲ್ಲಿಸಿ ಅಂತ ಯುವತಿ ಎಂದರೂ ಕೇಳದ ಚಾಲಕ, ಆಟೋದಲ್ಲಿ ಡೀಸೆಲ್ ಇಲ್ಲ, ಡೀಸೆಲ್ ಹಾಕಿಸಿಕೊಂಡು ಹೊಸ ಬಸ್ ನಿಲ್ದಾಣದ ಕಡೆ ಬಿಡ್ತೀನಿ ಅಂತ ನಂಬಿಸಿದ್ದಾನೆ. ಬಳಿಕ ನಗರದ ಹೊರಭಾಗದ ವರ್ಕನಳ್ಳಿಯ ನಿರ್ಜನ ಪ್ರದೇಶದ ಹಾಳು ಬಿದ್ದ ಮನೆಯಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಅತ್ಯಾಚಾರದ ದೃಶ್ಯ ರೆಕಾರ್ಡ್ ಮಾಡಿದ ಸ್ನೇಹಿತ

ಯುವತಿ ನಿನ್ನ ಕಾಲಿಗೆ ಬೀಳುತ್ತೇನೆ, ದಯವಿಟ್ಟು ನನ್ನ ಬಿಟ್ಟುಬಿಡು ಅಂತ ಬೇಡಿಕೊಂಡು, ಕಣ್ಣೀರು ಹಾಕಿದ್ದಾಳೆ. ಆದರೆ ಅದಕ್ಕೆ ಕಿವಿಗೊಡದ ಚಾಲಕ ಯುವತಿ ಮೇಲೆ ರೇಪ್ ಮಾಡಿದ್ದಾನೆ. ಬಳಿಕ ಯಾರಿಗೂ ಈ ಬಗ್ಗೆ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಇನ್ನು ಆಟೋ ಚಾಲಕ ಅತ್ಯಾಚಾರ ಮಾಡುತ್ತಿದ್ದರೆ ಆತನ ಸ್ನೇಹಿತ ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.

ಪೊಲೀಸರಿಂದ ಆರೋಪಿ ಬಂಧನ

ಇನ್ನು ಈ ಬಗ್ಗೆ ಯುವತಿ ಚಿಕ್ಕಪ್ಪ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೂರು ಪಡೆದ ಪೊಲೀಸರು, ಅತ್ಯಾಚಾರ ವೇಸಗಿದ ಆಟೋ ಚಾಲಕ ಹನುಮಂತ ಹಾಗೂ ಆತನ ಸ್ನೇಹಿತ ನರಸಪ್ಪನನ್ನು ಬಂಧಿಸಿ, ಆಟೋ ಜಪ್ತಿ ಮಾಡಿದ್ದಾರೆ.

ಭಗ್ನ ಪ್ರೇಮಿಯಿಂದ ಆಯಸಿಡ್ ಅಟ್ಯಾಕ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 24 ವರ್ಷದ ಯವತಿ ಮೇಲೆ ಆಯಸಿಡ್ ಅಟ್ಯಾಕ್ ನಡೆದಿದೆ. ಪ್ರೀತಿಗೆ ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಯೇ ಈ ರೀತಿಯ ಪಾಪದ ಕೃತ್ಯ ಎಸಗಿದ್ದಾನೆ. ಸುಂಕದ ಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ನಾಗೇಶ್ ಎಂಬಾತ ಆಯಸಿಡ್ ಎರಚಿದ್ದಾನೆ.

ಪ್ರೀತಿ ನಿರಾಕರಿಸಿದ್ದಕ್ಕೆ ಪಾಪದ ಕೃತ್ಯ

ಯುವತಿ ನಾಗೇಶ್‌ನ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ನಿನ್ನೆ ಸಂಜೆಯೂ ಯುವತಿ ಹಾಗೂ ನಾಗೇಶ್ ನಡುವೆ ಗಲಾಟೆ ನಡೆದಿತ್ತು. ಅದೇ ದ್ವೇಷದಿಂದ ಇಂದು ಆಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಬಂದು ಆಯಸಿಡ್ ಎರಚಿ, ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಾತು ವಕುಲಾ ಎರಡು ಕಾದಲ್ ಚಲನಚಿತ್ರ ವಿಮರ್ಶೆ: ವಿಜಯ್ ಸೇತುಪತಿ, ನಯನತಾರಾ ಅಭಿನಯದ ಮಿಶ್ರ ಪ್ರತಿಕ್ರಿಯೆ ಪಡೆಯುತ್ತದೆ; ಅಭಿಮಾನಿಗಳು ಸಮಂತಾ ರುತ್ ಪ್ರಭುವನ್ನು ಹೊಗಳುವುದನ್ನು ನಿಲ್ಲಿಸಲು ಸಾಧ್ಯವಿಲ್ಲ!

Thu Apr 28 , 2022
ವಿಜಯ್ ಸೇತುಪತಿ,ನಯನತಾರಾ ಮತ್ತು ಸಮಂತಾ ರುತ್ ಪ್ರಭು ಅಭಿನಯದ ವಿಘ್ನೇಶ್ ಶಿವನ್ ಅವರ ಕಾತು ವಾಕುಲಾ ಎರಡು ಕಾದಲ್ ಇಂದು ದೊಡ್ಡ ಪರದೆಯ ಮೇಲೆ ಬಂದಿದೆ. ಚಿತ್ರದ ಹಾಡುಗಳು ಮತ್ತು ಟ್ರೇಲರ್ ಅದ್ಭುತವಾದ ಪ್ರೀ ರಿಲೀಸ್ ಬಜ್ ಅನ್ನು ಸೃಷ್ಟಿಸಿದೆ.ಇದೀಗ ಚಿತ್ರ ಬಿಡುಗಡೆಯಾಗಿ ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಂತೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕಾತು ವಾಕುಲಾ ಎರಡು ಕಾದಲ್‌ಗೆ ನೆಟಿಜನ್‌ಗಳಿಂದ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ, ಆದಾಗ್ಯೂ, ಬಹುತೇಕ ಎಲ್ಲಾ […]

Advertisement

Wordpress Social Share Plugin powered by Ultimatelysocial