ಛತ್ತೀಸ್‌ಗಢ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಬಸ್ ಕಂಡಕ್ಟರ್ ಬಂಧನ.

ತ್ತೀಸ್ಗಢದ ಮುಂಗೇಲಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಆಕೆ ತೆರಳುತ್ತಿದ್ದ ಶಾಲಾ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಬಿಲಾಸ್ಪುರ್: ಛತ್ತೀಸ್ಗಢದ ಮುಂಗೇಲಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಆಕೆ ತೆರಳುತ್ತಿದ್ದ ಶಾಲಾ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಜನವರಿ 17 ರಂದು 41 ವರ್ಷದ ಆರೋಪಿಯು ತನ್ನ ನಿಗದಿತ ನಿಲ್ದಾಣದಲ್ಲಿ ಶಾಲಾ ಬಸ್ನಿಂದ ಇಳಿದ ನಂತರ ಮಗುವನ್ನು ಮನೆಗೆ ಕರೆದುಕೊಂಡು ಹೋದಾಗ ಈ ಘಟನೆ ನಡೆದಿದೆ ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಮೋಹನ್ ಸಿಂಗ್ ಹೇಳಿದ್ದಾರೆ. ಬಸ್ನಲ್ಲಿ ಮೂವರು ಮಹಿಳಾ ಶಿಕ್ಷಕರು ಮತ್ತು ಇತರ ಮಕ್ಕಳು ಇದ್ದರು. ಬಸ್ ನಿಲ್ದಾಣದಿಂದ ಮನೆಗೆ ಡ್ರಾಪ್ ಮಾಡುವಾಗ ಆರೋಪಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗು ತನ್ನ ಖಾಸಗಿ ಅಂಗಗಳಲ್ಲಿ ನೋವೆಂದು ದೂರು ನೀಡಿದಾಗ, ಆಕೆಯ ತಾಯಿ ಮಗುವನ್ನು ವೈದ್ಯರ ಬಳಿಗೆ ಕರೆದೊಯ್ದಿದ್ದಾರೆ.

ಬಳಿಕ ಖಾಸಗಿ ಭಾಗಗಳಲ್ಲಿ ರಕ್ತಸ್ರಾವವಾಗುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.  ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಎರಡು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಬಸ್ನಲ್ಲಿದ್ದ ಶಿಕ್ಷಕಿಯರು ಮತ್ತು ಚಾಲಕನ ಹೇಳಿಕೆಗಳನ್ನು ಪಡೆಯಲಾಗಿದೆ. ಆದರೆ, ಅವರು ಘಟನೆಯ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿ ಅತ್ಯಾಚಾರ ಮತ್ತು ಇತರ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನನಗಿರುವುದು ಒಂದೇ ಕನಸು.

Thu Jan 19 , 2023
ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದಲ್ಲಿ ರ್ಯಾಲಿ ನಡೆದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಪಾಟ್ನ: ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದಲ್ಲಿ ರ್ಯಾಲಿ ನಡೆದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ನನಗೆ ಒಂದೇ ಒಂದು ಕನಸಿದೆ, ಅದು ತನಗಾಗಿ ಅಲ್ಲ, ಬದಲಾಗಿ ವಿಪಕ್ಷಗಳ ನಾಯಕರು ಒಗ್ಗಟ್ಟಾಗಿ ಮುನ್ನಡೆಯುವುದೇ ನನ್ನ ಕನಸಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ತೆಲಂಗಾಣದ ಖಮ್ಮಮ್ ನಲ್ಲಿ […]

Advertisement

Wordpress Social Share Plugin powered by Ultimatelysocial