ನಟಿ ರಶ್ಮಿಕಾ ಮಂದಣ್ಣ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಬೆಳೆದಿದ್ದಾರೆ.

 

ಸದ್ಯಕ್ಕಂತೂ ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡಿರುವ ಅವರಿಗೆ ಕೈ ತುಂಬ ಸಂಭಾವನೆ ಸಿಗುತ್ತಿದೆ.

ನಟಿ ರಶ್ಮಿಕಾ ಮಂದಣ್ಣ  ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಬೆಳೆದಿದ್ದಾರೆ.

ಅವರ ಬಗ್ಗೆ ದಿನಕ್ಕೊಂದು ಗಾಸಿಪ್   ಕೇಳಿಬರುತ್ತಿದೆ. ಎಲ್ಲದಕ್ಕೂ ಅವರು ಪ್ರತಿಕ್ರಿಯೆ ನೀಡೋದಿಲ್ಲ. ಆದರೆ ಕೆಲವು ವಿಚಾರಗಳಿಗೆ ಖಂಡಿತವಾಗಿ ಉತ್ತರ ನೀಡುತ್ತಾರೆ. ರಶ್ಮಿಕಾ ಮಂದಣ್ಣ ಮತ್ತು ನಟ ಟೈಗರ್​ ಶ್ರಾಫ್​  ಬಗ್ಗೆ ಕೆಲವು ದಿನಗಳಿಂದ ಒಂದು ಗುಸುಗುಸು ಹಬ್ಬಿತ್ತು. ಇಬ್ಬರೂ ಜೊತೆಯಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆ ಗಾಸಿಪ್​ ನಿಜ ಎಂದು ರಶ್ಮಿಕಾ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ತಾವು ಮತ್ತು ಟೈಗರ್​ ಶ್ರಾಫ್​ ಜೊತೆಯಾಗಿ ಇರುವ ಒಂದು ವಿಡಿಯೋವನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಸೂಕ್ತ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ಟೈಗರ್​ ಶ್ರಾಫ್​ ಅವರು ಒಂದು ಸಿನಿಮಾದಲ್ಲಿ ಜೊತೆಯಾಗಿ ನಟಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ ಅದರಲ್ಲೊಂದು ಟ್ವಿಸ್ಟ್​ ಇದೆ. ಸದ್ಯಕ್ಕೆ ಈ ಇವರಿಬ್ಬರು ತೆರೆ ಹಂಚಿಕೊಂಡಿರುವುದು ಯಾವುದೇ ಸಿನಿಮಾಗಾಗಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ ಜೊತೆಯಾಗಿ ನಟಿಸಿದ್ದಾರೆ. ಈ ವಿಚಾರವನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ರಶ್ಮಿಕಾ ಮಂದಣ್ಣ ಅವರು ಖಚಿತ ಪಡಿಸಿದ್ದಾರೆ.

‘ಗಾಸಿಪ್​ಗಳು ನಿಜವಾಗಿದೆ.. ನಾನು ಮತ್ತು ಟೈಗರ್​ ಶ್ರಾಫ್​ ಈಗ ತಾನೇ ಒಂದು ಜಾಹೀರಾತಿಗಾಗಿ ಶೂಟಿಂಗ್​ ಮುಗಿಸಿದೆವು’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ‘ಟೈಗರ್​ ಜೊತೆ ಕೆಲಸ ಮಾಡಿದ್ದು ಚೆನ್ನಾಗಿತ್ತು’ ಎಂದು ಕೂಡ ರಶ್ಮಿಕಾ ಹೇಳಿದ್ದಾರೆ. ಇಂಥ ಹಲವಾರು ಜಾಹೀರಾತುಗಳಲ್ಲಿ ಅವರು ನಟಿಸುತ್ತಿದ್ದಾರೆ. ಅನೇಕ ಕಂಪನಿಗಳಿಗೆ ರಾಯಭಾರಿ ಆಗಿರುವ ರಶ್ಮಿಕಾ ಮಂದಣ್ಣ ಅವರಿಗೆ ಅವುಗಳಿಂದ ಕೋಟ್ಯಂತರ ರೂಪಾಯಿ ಸಂಭಾವನೆ ಬರುತ್ತಿದೆ.

ಸದ್ಯ ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರಿಗೆ ಪ್ಯಾನ್​ ಇಂಡಿಯಾ ಹೀರೋಯಿನ್​ ಪಟ್ಟ ಸಿಕ್ಕಿತು. ಕೆಲವೇ ದಿನಗಳಲ್ಲಿ ‘ಪುಷ್ಪ 2’ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ತಮಿಳಿನಲ್ಲಿ ‘ದಳಪತಿ’ ವಿಜಯ್​ ಜೊತೆಗಿನ ಚಿತ್ರಕ್ಕೂ ಅವರು ನಾಯಕಿ ಆಗಿ​ದ್ದಾರೆ. ಬಾಲಿವುಡ್​ನಲ್ಲಿ ಕೂಡ ಅವರಿಗೆ ಹಲವು ಆಫರ್​ಗಳು ಸಿಗುತ್ತಿವೆ. ‘ಗುಡ್​ಬೈ’, ‘ಮಿಷನ್​ ಮಜ್ನು’ ಮುಂತಾದ ಹಿಂದಿ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವುಗಳ ರಿಲೀಸ್​ಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕುಡಿಯುವ ನೀರಿಗೆ ಆಗ್ರಹಿಸಿ ಎಮ್ಮೆ ಮೆರವಣಿಗೆ

Tue Jul 12 , 2022
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನೇ ದಿನೇ ಕುಡಿಯುವ ನೀರಿನ ಸಮಸ್ಯೆ ತಲೇದೋರುತ್ತಿದ್ದು ಸಮರ್ಪಕವಾಗಿ ಕುಡಿಯುವ ನೀರಿನ ಸಮಸ್ಯೆ ಶಾಶ್ವತ ವಾಗಿ ಬಗೆಹರಿಸುವಂತೆ ಒತ್ತಾಯಿಸಿ ಮುದಗಲ್ ನಲ್ಲಿ ಕರವೇ ಪದಾಧಿಕಾರಿಗಳು ನಾನಾ ವಾರ್ಡ ನ ನಿವಾಸಿಗಳ ಜೊತೆಗೂಡಿ ಎಮ್ಮೆಗಳ ಮೇಲೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಮುದಗಲ್ ಪುರಸಭೆ ವ್ಯಾಪ್ತಿಯ ಬಸ್ ನಿಲ್ದಾಣ ದ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕರವೇ ಪದಾಧಿಕಾರಿಗಳು ಶಾಸಕ ಹೂಲಗೇರಿ ಹಾಗೂ […]

Advertisement

Wordpress Social Share Plugin powered by Ultimatelysocial