ನವದೆಹಲಿ : ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಆಕರ್ಷಕ ಉದ್ಯಾನವನವನ್ನು ಇಲ್ಲಿಯವರೆಗೂ ಮೊಘಲ್ ಗಾರ್ಡನ್ಸ್ ಎನ್ನುವ ಹೆಸರನಿಂದ ಕರೆಯಲಾಗುತ್ತಿತ್ತು. ಈ ಉದ್ಯಾನವನವನ್ನು ಈಗ “ಅಮೃತ್ ಉದ್ಯಾನ” ಎಂದು ಕರೆಯಲಾಗುತ್ತದೆ.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿರುವ ಅಂಗವಾಗಿ “ಆಜಾದಿ ಕಾ ಅಮೃತ್ ಮಹೋತ್ಸವ” ಅಭಿಯಾನದ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಹೆಸರನ್ನು ನೀಡಿದ್ದಾರೆ ಎಂದು ರಾಷ್ಟ್ರಪತಿಗಳ ಉಪ ಪತ್ರಿಕಾ ಕಾರ್ಯದರ್ಶಿ ನವಿಕಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.
ಉದ್ಯಾನವನ್ನು ಭಾನುವಾರ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಮತ್ತು ಈ ಬಾರಿ ಸುಮಾರು ಎರಡು ತಿಂಗಳ ಕಾಲ ತೆರೆದಿರುತ್ತದೆ ಎಂದು ಅವರು ಘೋಷಣೆ ಮಾಡಿದರು. ಜನವರಿ 31 ರಿಂದ ಮಾರ್ಚ್ 26 ರವರೆಗೆ ಈ ಉದ್ಯಾನವನ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇದರ ಹೊರತಾಗಿ, ಕೆಲವು ದಿನಗಳನ್ನು ವಿಶೇಷವಾಗಿ ವಿಕಲಚೇತನರಿಗೆ, ರೈತರು ಮತ್ತು ಮಹಿಳೆಯರುಗೆ ಮೀಸಲಿಡಲಾಗಿದೆ ಎಂದಿದ್ದಾರೆ.
https://play.google.com/store/apps/details?id=com.speed.newskannada