ಉಡುಪಿ: ಮೊನ್ನೆಮೊನ್ನೆಯಷ್ಟೇ ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ಕೋಟದ ಕೊರಗರ ಮನೆಯಲ್ಲಿ ಮೆಹೆಂದಿ ಸಂದರ್ಭದಲ್ಲಿ ನಡೆದ ಅವಾಂತರ ವಿಚಾರ ಇದೀಗ ರಾಷ್ಟ್ರ ರಾಜಧಾನಿ ದೆಹಲಿಗೂ ತಲುಪಿದೆ. ಮಾತ್ರವಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರ ನೀಡುವಂತೆ ಉಡುಪಿ ಎಸ್ಪಿಗೆ ದೆಹಲಿಯಿಂದ ಪತ್ರ ಕೂಡ ರವಾನೆಯಾಗಿದೆ.
ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಡಿಜೆ ಹಾಕಿದ್ದಾರೆ ಎಂಬ ದೂರಿನ ಅನ್ವಯ ತೆರಳಿದ್ದ ಪಿಎಸ್ಐ ಬಿ.ಪಿ. ಸಂತೋಷ್, ಮದುಮಗ ಸಹಿತ ಮನೆಯವರ ಮೇಲೆ ಲಾಠಿ ಪ್ರಹಾರ ನಡೆಸಿದ್ದರಿಂದ ಹಲವರು ಗಾಯಗೊಂಡಿದ್ದರು. ಈ ಬಗ್ಗೆ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.
ಈ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರು ತನಿಖೆಗೆ ಆದೇಶ ನೀಡಿದ್ದರು. ಬಳಿಕ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಅವರು ಎಸ್ಐ ಸಂತೋಷ್ ಅವರನ್ನು ಅಮಾನತುಗೊಳಿಸಿದ್ದಲ್ಲದೆ, ಐವರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: